![cover image](https://wikiwandv2-19431.kxcdn.com/_next/image?url=https://upload.wikimedia.org/wikipedia/commons/thumb/8/80/Saligrama._Kayanahalli.jpg/640px-Saligrama._Kayanahalli.jpg&w=640&q=50)
ಕೃಷ್ಣರಾಜನಗರ
From Wikipedia, the free encyclopedia
ಕೃಷ್ಣರಾಜನಗರವು ಮೈಸೂರು ಜಿಲ್ಲೆಯ ಒಂದು ಪ್ರಮುಖ ತಾಲ್ಲೂಕು ಕೇಂದ್ರವಾಗಿದ್ದು ಕಾವೇರಿ ನದಿಯ ದಡದಲ್ಲಿದೆ. ಈ ನಗರವು ಹಿಂದೆ ಎಡತೊರೆ ಎಂದು ಕರೆಯಲ್ಪಡುತ್ತಿತ್ತು. ಈ ನಗರದ ಕಾವೇರಿ ದಂಡೆಯ ಮೇಲೆ ಅರ್ಕೇಶ್ವರ ಸ್ವಾಮಿ ದೇವಸ್ಥಾನವಿದೆ. ಇದು ಜಗತ್ತಿನಲ್ಲೆ ಕಂಡುಬರುವ ಎರಡನೇ ಸೂರ್ಯ ದೇವಾಲಯವಾಗಿದೆ. ಈ ದೇವಾಲದಲ್ಲಿರುವ ಲಿಂಗದ ಮೇಲೆ ಶಿವರಾತ್ರಿಯಾದ ಮಾರನೇ ದಿನ ಸೂರ್ಯನ ಕಿರಣಗಳು ನೇರವಾಗಿ ಬೀಳುತ್ತವೆ[1]
Krishnarajanagara
ಕೃಷ್ಣರಾಜನಗರ ಹೊಸ ಯಡತೊರೆ | |
---|---|
ನಗರ | |
![]() ಕಾಯನಹಳ್ಳಿ | |
Nickname: ಕೆಆರ್ಎನ್ | |
Coordinates: 12.46°N 76.39°E / 12.46; 76.39 | |
Country | ![]() |
ರಾಜ್ಯ | ಕರ್ನಾಟಕ |
ಜಿಲ್ಲೆ | ಮೈಸೂರು |
Population (2010) | |
• Total | ೫೬,೩೧೨ |
Languages | |
• Official | ಕನ್ನಡ |
Time zone | UTC+5:30 (IST) |
ಪಿನ್ ಕೊಡು | 571 602 |
Telephone code | 08223 |
Vehicle registration | KA-45 KA-09 KA-55 |
ಕೃಷ್ಣರಾಜನಗರವು ಮೈಸೂರು ಜಿಲ್ಲೆಯ ಒಂದು ಪ್ರಮುಖ ತಾಲ್ಲೂಕಾಗಿದ್ದು, ಇದು ಸರಿಸುಮಾರು 1925-1930ರ ಮಧ್ಯಂತರ ಇಸವಿಯಲ್ಲಿ ನಗರವಾಗಿ ಸ್ಥಾಪಿತಗೊಂಡಿದ್ದು ಕಾವೇರಿ ನದಿ ಪ್ರವಾಹದ ಹಾನಿಯ ಪರಿಣಾಮ ಎಡತೊರೆಯು ಹುಟ್ಟಿ ನಂತರ ಕೃಷ್ಣರಾಜನಗರ ಎಂದಾಯಿತು. (ಎಡತೊರೆ ಹೆಸರಿನ ಹಿನ್ನೆಲೆ: ನಗರದ ಎಡಭಾಗಕ್ಕೆ ತೊರೆಯಿದ್ದು ಆದಕಾರಣ ಈ ಹೆಸರು ಬಂದಿದೆ.
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ನಾಮಾಂಕಿತವಾಗಿ ಇದನ್ನು ಕೃಷ್ಣರಾಜನಗರ ಎಂದು ನಾಮಕರಣ ಮಾಡಲಾಗಿದೆ. ಇವರ ಕಾಲಘಟ್ಟದಲ್ಲಿ ಕಾವೇರಿ ನದಿಗೆ ಅಚ್ಚಕಟ್ಟಾದ ಸೇತುವೆ ನಿರ್ಮಾಣ ಮಾಡಲಾಗಿದ್ದು, ಇದರ ನಿರ್ಮಾತೃ ಅಂದಿನ ಮೈಸೂರು ಸಂಸ್ಥಾನದ ದೀವಾನರಾಗಿದ್ದ ಸರ್.ಎಂ. ವಿಶ್ವೇಶ್ವರಯ್ಯನವರು ಕಾವೇರಿಯ ನದಿಯ ದಡಕ್ಕೆ ಆರ್ಕೇಶ್ವರ ಸ್ವಾಮಿಯ ದೇವಾಲಯವಿದ್ದು ಪ್ರತಿ ವರ್ಷ ಜನವರಿ ತಿಂಗಳಲ್ಲಿ ಅದ್ದೂರಿ ಜಾತ್ರೆ ಜರುಗುತ್ತದೆ. ಕೆ.ಆರ್.ನಗರಕ್ಕೆ ಉತ್ತಮ ರೈಲು ಸಂಪರ್ಕವಿದ್ದು ಹಾಸನವನ್ನು ಮೈಸೂರಿಗೆ ಸಂಪರ್ಕಿಸುತ್ತದೆ. ಕೆ.ಆರ್.ನಗರದಿಂದ 22ಕಿ.ಮೀ ದೂರದಲ್ಲಿ ಪ್ರಸಿದ್ದ ಚುಂಚನಕಟ್ಟೆ ಸ್ಥಳದಲ್ಲಿ ಕಾವೇರಿ ನದಿಯ ಜಲಪಾತವಿದ್ದು ನೋಡುಗರನ್ನು ಆಕರ್ಷಿಸುತ್ತಿದೆ, ಶ್ರೀ ರಾಮನು ಇಲ್ಲಿನ ಪ್ರಮುಖ ಆರಾಧ್ಯದೈವ. ಸರ್ವಧರ್ಮಕ್ಕೊ ಸಮನ್ವಯವಾಗಿ ಇಲ್ಲಿ ಅನೇಕ ಮಸೀದಿಗಳು, ಢೋರ್ನಹಳ್ಳಿ ಎಂಬಲ್ಲಿ ಕ್ರೈಸ್ತರ ಸಂತ ಅಂತೋಣಿರವರ ಚರ್ಚ್ ಇದ್ದು ಸರ್ವ ಧರ್ಮ ಸಮನ್ವಯತೆಯನ್ನು ಎತ್ತಿ ಹಿಡಿದಿದೆ. ಇನ್ನು ಶಿಕ್ಷಣ ಕ್ಷೇತ್ರದಲ್ಲಿ ತುಂಬಾ ಅಭಿವೃದ್ಧಿಯಾಗಿದ್ದು ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಪದವಿ ಕಾಲೇಜು, ಡಿಪ್ಲೋಮಾ ಕಾಲೇಜು, ಪಿ.ಯು ಕಾಲೇಜು, ಪ್ರೌಢಶಾಲೆಗಳು ಸಮಾಜಕ್ಕೆ ಉತ್ತಮ ವಿದ್ಯಾರ್ಥಿಗಳನ್ನು ಕೊಡುಗೆಯಾಗಿ ನೀಡುತ್ತಿರುವದು ಶ್ಲಾಘನೀಯ ವಿಷಯ. ಇನ್ನು ರಾಜಕೀಯ ವಿಷಯಕ್ಕೆ ಬಂದರೆ ಪ್ರಸ್ತುತ ತಾಲ್ಲೂಕಿನ ಶಾಸಕರಾಗಿ ಡಿ ರವಿಶಂಕರ್ ಇದ್ದಾರೆ. ಇನ್ನು ಲೋಕಸಭಾ ಕ್ಷೇತ್ರದಲ್ಲಿ ಕೆ.ಆರ್.ನಗರವು ಮಂಡ್ಯ ಕ್ಷೇತ್ರವನ್ನು ಪ್ರತಿನಿಧಿಸುತ್ತದೆ.