ಚೋಳ ವಂಶ
From Wikipedia, the free encyclopedia
ದಕ್ಷಿಣ ಭಾರತದ ಕೆಲವು ಭಾಗಗಳನ್ನು ಧೀರ್ಘಕಾಲ ಆಳಿದ ರಾಜವಂಶಗಳಲ್ಲಿ ಚೋಳರ ವಂಶವು (ತಮಿಳು:சோழர் குலம், ಟೆಂಪ್ಲೇಟು:IPA2ಒಂದು ಪ್ರಮುಖ ತಮಿಳು ನಾಯಕ ರಾಜವಂಶವಾಗಿದೆ. ಕಿಸ್ತ ಪೂರ್ವ 3ರನೇ ಶತಮಾನದಲ್ಲಿ ಉತ್ತರಭಾರತದ ದೊರೆಯಾಗಿದ್ದ. ಅಶೋಕನ, ಕಾಲದ ಶಾಸನಗಳು, ಈ ವಂಶವು ಕ್ರಿಸ್ತಶಕ 13ನೇ ಶತಮಾನದವರೆಗೆ ತಮ್ಮ ಆಳ್ವಿಕೆಯನ್ನು ಮುಂದುವರೆಸಿಕೊಂಡು ಹೋದುದಕ್ಕೆ ಪುರಾವೆಗಳನ್ನು ಕೊಡುತ್ತವೆ.ಚೋಳರನ್ನು ಕರ್ನಾಟಕದ ಇತಿಹಾಸಕಾರ ಪ್ರಕಾರ,ಸಾಮಂತ ಕ್ಷತ್ರಿಯರು(ಪಲ್ಲವ ರಾಜ್ಯದ ಸೈನಿಕರು) ಎಂದು ಬಣ್ಣಿಸಲಾಗಿದೆ ...
Chola Empire | |||||
ಚೋಳ ವಂಶ | |||||
| |||||
Chola's empire and influence at the height of its power (c. 1050) | |||||
ರಾಜಧಾನಿ | Early Cholas: Poompuhar, Urayur, Medieval Cholas: Pazhaiyaarai, Thanjavur Gangaikonda Cholapuram | ||||
ಭಾಷೆಗಳು | Tamil | ||||
ಧರ್ಮ | ಹಿಂದೂ ಧರ್ಮ | ||||
ಸರ್ಕಾರ | Monarchy | ||||
King | |||||
- | 848-871 | Vijayalaya Chola | |||
- | 1246-1279 | Rajendra Chola III | |||
ಐತಿಹಾಸಿಕ ಯುಗ | Middle Ages | ||||
- | ಸ್ಥಾಪಿತ | 300s BC | |||
- | Rise of the medieval Cholas | 848 | |||
- | ಸ್ಥಾಪನೆ ರದ್ದತಿ | 1279 | |||
ವಿಸ್ತೀರ್ಣ | |||||
- | 1050 est. | ೩೬,೦೦,೦೦೦ km² (೧೩,೮೯,೯೬೮ sq mi) | |||
ಇಂದು ಇವುಗಳ ಭಾಗ | ಭಾರತ ಶ್ರೀಲಂಕಾ ಬಾಂಗ್ಲಾದೇಶ ಬರ್ಮಾ ಥೈಲ್ಯಾಂಡ್ ಮಲೇಶಿಯ ಕಾಂಬೋಡಿಯ ಇಂಡೋನೇಷ್ಯಾ ವಿಯೆಟ್ನಾಮ್ ಸಿಂಗಾಪುರ ಮಾಲ್ಡೀವ್ಸ್ | ||||
ಚೋಳರ ಹೃದಯ ಭಾಗವು ಕಾವೇರಿ ನದಿಯ, ಫಲವತ್ತಾದ ಕಣಿವೆಯಾಗಿತ್ತು. ಆದರೆ ತಮ್ಮ ಅಧಿಕಾರದ ಬಹುಪಾಲು ಭಾಗವನ್ನು ಪ್ರಮುಖವಾಗಿ 9ನೇ ಶತಮಾನದ ಅರ್ಧದಿಂದ 13ನೆ ಶತಮಾನದ ಪ್ರಾರಂಭದವರೆಗೂ ಆಳಿದರು.[1]
ತುಂಗಭದ್ರಾದ ಇಡೀ ದಕ್ಷಿಣಭಾಗವನ್ನು ಒಂದಾಗಿಸಿ ಒಂದು ರಾಜ್ಯವನ್ನಾಗಿ ಮಾಡಿ ಸುಮಾರು ಎರಡು ಶತಮಾನಗಳಿಗಿಂತಲೂ ಹೆಚ್ಚು ಕಾಲ ಆಡಳಿತ ನಡೆಸಿದರು.[2]
ರಾಜರಾಜ ಚೋಳ I ಮತ್ತು ಅವನ ಮಗನಾದ ರಾಜೇಂದ್ರಚೋಳ Iನ ಕಾಲದಲ್ಲಿ ಈ ವಂಶವು ದಕ್ಷಿಣ ಏಷ್ಯಾದ ಮತ್ತು ಆಗ್ನೇಯ ಏಷ್ಯಿಯಾದಲ್ಲಿ ರಾಜಕೀಯವಾಗಿ, ಆರ್ಥಿಕವಾಗಿ ಮತ್ತು ಸಾಂಸ್ಕೃತಿಕವಾಗಿ ತನ್ನ ಅಧಿಕಾರವನ್ನು ಸ್ಥಾಪಿಸಿತು.[3][4] ಪೂರ್ವಭಾಗದಲ್ಲಿ ಆಗ ತಾನೆ ಉದಯವಾಗುತ್ತಿದ್ದ ಗಂಗರ ಸಾಮ್ರಾಜ್ಯದ ಅಧಿಕಾರವನ್ನು ರಾಜೇಂದ್ರ ಚೋಳI ಕಸಿದುಕೊಂಡನು ಮತ್ತು ಚೀನಾದ ಪುನರಾವರ್ತಿತ ದಾಳಿ ಹಾಗೂ ಶ್ರೀವಿಜಯನ, ಸಮುದ್ರ ಕದನವು ಆ ಸಮ್ರಾಜ್ಯದ ಮೇಲೆ ಪ್ರಭಾವ ಬೀರಿದವು.[5] 1010–1200ರ ಅವಧಿಯಲ್ಲಿ, ಚೋಳರ ಪ್ರಾಂತಗಳು ದಕ್ಷಿಣದ ಮಾಲ್ಡೀವ್ಸ್ ದ್ವೀಪಗಳಿಂದ ಉತ್ತರದ ಆಂದ್ರಪ್ರದೇಶದ ಗೋದಾವರಿ ನದಿಯ ದಂಡೆಯವರೆಗೂ ಹರಡಿಕೊಂಡಿತು.[6] ರಾಜರಾಜಚೋಳನು ದಕ್ಷಿಣ ಭಾರತದ, ಈಗಿನ ಶ್ರೀಲಂಕಾದ ಭಾಗಗಳನ್ನು ಮತ್ತು ಮಾಲ್ಡೀವ್ಸ್ ದ್ವೀಪಗಳನ್ನು ಆಕ್ರಮಿಸಿಕೊಂಡನು.[4] ರಾಜೇಂದ್ರ ಚೋಳನು ತನ್ನ ವಿಜಯಯಾತ್ರೆಯನ್ನು ಉತ್ತರದ ಗಂಗಾ ನದಿಯವರೆಗೂ ಮುಟ್ಟಿಸಿ, ಪಾಟಲಿಪುತ್ರದ ರಾಜನಾದ ಪಾಲ ಮತ್ತು ಮಹಿಪಾಲರನ್ನು ಸೋಲಿಸಿದನು. ಈತನು ಯಶಸ್ವಿಯಾಗಿ ಮಲೆ ಆರ್ಕಿಪೆಲಗೋದ ಸಾಮ್ರಾಜ್ಯಗಳನ್ನು ಆಕ್ರಮಿಸಿದನು.[7][8] 13ನೇ ಶತಮಾನದ ಆರಂಭದಲ್ಲಿ ಪಾಂಡ್ಯರ, ಉದಯದಿಂದ ಚೋಳರ ಅವನತಿ ಪ್ರಾರಂಭವಾಯಿತು. ಕಡೆಗೆ ಇವರೇ ಚೋಳರ ಸಂಪೂರ್ಣ ಪತನಕ್ಕೆ ಕಾರಣರಾದರು.[9][10][11]
ಚೋಳರು ಶಾಶ್ವತವಾದ ತಮ್ಮ ಪಿತ್ರಾರ್ಜಿತ ಆಸ್ತಿಯನ್ನು ನಮಗೆ ಬಿಟ್ಟು ಹೋಗಿದ್ದಾರೆ. ತಮಿಳು ಸಾಹಿತ್ಯದಲ್ಲಿ ಅವರಿಗಿದ್ದ ಆಸಕ್ತಿ ಮತ್ತು ದೇವಾಲಯಗಳನ್ನು ಕಟ್ಟುವುದರಲ್ಲಿ ಅವರಲ್ಲಿದ್ದ ಕೌತುಕ ತಮಿಳು ಸಾಹಿತ್ಯ ಮತ್ತು ಶಿಲ್ಪಕಲೆಗೆ ಅವರು ಕೊಟ್ಟ ಅಪಾರ ಕೊಡುಗೆಗಳಿಗೆ ಕಾರಣವಾದವು.[4] ಚೋಳ ಅರಸರು ಕಟ್ಟಡಗಳನ್ನು ಕಟ್ಟುವುದರಲ್ಲಿ ಅತ್ಯಾಸಕ್ತಿಯನ್ನು ಹೊಂದಿದ್ದರು ಮತ್ತು ತಮ್ಮ ದೇವಸ್ಥಾನಗಳನ್ನು ಪೂಜಾ ಕೇಂದ್ರಗಳನ್ನಾಗಿ ಅಷ್ಟೇ ಅಲ್ಲದೆ ಆರ್ಥಿಕ ಚಟುವಟಿಕೆಯ ಕೇಂದ್ರಗಳನ್ನಾಗಿ ಮಾಡಿದ್ದರು.[12][13] ಅವರು ಕೇಂದ್ರಾಡಳಿತಮಾದರಿಯ ಸರ್ಕಾರ ಅಧಿಕಾರಶಾಹಿಯನ್ನು ಸ್ಥಾಪಿಸಿದ ಮೊದಲಿಗರು.