ಮಹಾಭಾರತ
ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯಗಳಲ್ಲಿ ಒಂದು / From Wikipedia, the free encyclopedia
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ.[1] ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ.
ಮಹಾಭಾರತ | |
---|---|
महाभारतम् | |
ಮಾಹಿತಿ | |
ಧರ್ಮ | ಹಿಂದೂ ಧರ್ಮ |
ಲೇಖಕ | ವೇದವ್ಯಾಸ |
ಭಾಷೆ | ಸಂಸ್ಕೃತ |
ಕಾವ್ಯ | ೨೦೦೦೦೦ |
ಹಿಂದೂ ಧರ್ಮಗ್ರಂಥಗಳು |
ಐತರೇಯ · ಬೃಹದಾರಣ್ಯಕ · ಈಶಾವಾಸ್ಯ · ತೈತ್ತಿರೀಯ · ಛಾಂದೋಗ್ಯ · ಕೇನ · ಮುಂಡಕ · ಮಾಂಡೂಕ್ಯ · ಕಠ · ಪ್ರಶ್ನ · ಶ್ವೇತಾಶ್ವತರ |
ಗರುಡ · ಅಗ್ನಿ . ನಾರದ . ಪದ್ಮ . ಸ್ಕಾಂದ . ಭವಿಷ್ಯ . ಬ್ರಹ್ಮ . ಭಾಗವತ . ಬ್ರಹ್ಮವೈವರ್ತ . ಬ್ರಹ್ಮಾಂಡ . ವಾಯು . ಲಿಂಗ . ವಿಷ್ಣು . ವಾಮನ . ಮಾರ್ಕಂಡೇಯ . ವರಾಹ . ಕೂರ್ಮ . ಮತ್ಸ್ಯ |
ಇತರ ಧರ್ಮಗ್ರಂಥಗಳು
ಭಗವದ್ಗೀತೆ · ಆಗಮ· ಶೂನ್ಯ ಸಂಪಾದನ· ಶ್ರೀ ಸಿದ್ಧಾಂತ ಶಿಖಾಮಣಿ · ವೀರಶೈವ ಪುರಾಣ · ವಿಷ್ಣು ಸಹಸ್ರನಾಮ . ಬಸವರಾಜ ವಿಜಯಂ |
ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು. ಅಲ್ಲದೇ ಇದನ್ನು ಅತಿ ಉದ್ದವಾದ ಮಹಾಕಾವ್ಯ ಎಂದು ವಿವರಿಸಲಾಗಿದೆ.[2][3] ಇದು ಹಿಂದೂ ಧರ್ಮದ ಒಂದು ಮುಖ್ಯ ಪಠ್ಯವೂ ಹೌದು. ವಿಶ್ವ ಸಾಹಿತ್ಯದ ಸಾಧನೆಗಳಲ್ಲಿ ಒಂದೆಂದು ಪರಿಗಣಿತವಾಗಿರುವ ಮಹಾಭಾರತ ಭಾರತೀಯ ಜನರ ಮನಸ್ಸಿನಲ್ಲಿ ಆಳವಾಗಿ ಬೇರೂರಿದೆ. ಮಹಾಭಾರತ ಕಥೆ ಶಂತನು ಮಹಾರಾಜನಿಂದ ಆರಂಭವಾಗುತ್ತದೆ. ಸಂಪೂರ್ಣ ಮಹಾಭಾರತ ಒಂದು ಲಕ್ಷಕ್ಕೂ ಹೆಚ್ಚು ಶ್ಲೋಕಗಳನ್ನು ಒಳಗೊಂಡಿದ್ದು ಗ್ರೀಕ್ನ ಜನಪದ ಮಹಾಕಾವ್ಯಗಳಾದ ಇಲಿಯಡ್ ಮತ್ತು ಒಡಿಸ್ಸಿ - ಎರಡನ್ನೂ ಸೇರಿಸಿದರೂ ಮಹಾಭಾರತದ ಏಳನೇ ಒಂದು ಭಾಗದಷ್ಟು ಮಾತ್ರ ಆಗುತ್ತದೆ. ಮಹಾಭಾರತ ೧೮ಪರ್ವ ಮತ್ತು ೧ಲಕ್ಷ ಶ್ಲೋಕಗಳನ್ನು ಒಳಗೊಂಡ ಅದ್ಭುತ ಮಹಾಕಾವ್ಯವಾಗಿದೆ.
ಮಹಾಭಾರತದಲ್ಲಿನ ಪ್ರಮುಖ ಕೃತಿಗಳು ಮತ್ತು ಕಥೆಗಳಲ್ಲಿ ಭಗವದ್ಗೀತೆ, ದಮಯಂತಿಯ ಕಥೆ, ಶಕುಂತಲೆಯ ಕಥೆ, ಪುರೂರವ ಮತ್ತು ಊರ್ವಶಿಯ ಕಥೆ, ಸಾವಿತ್ರಿ ಮತ್ತು ಸತ್ಯವಾನ್ ಕಥೆ, ಕಚ ಮತ್ತು ದೇವಯಾನಿಯ ಕಥೆ, ಋಷ್ಯಶೃಂಗನ ಕಥೆ ಮತ್ತು ರಾಮಾಯಣದ ಸಂಕ್ಷಿಪ್ತ ಆವೃತ್ತಿ, ಸಾಮಾನ್ಯವಾಗಿ ತಮ್ಮದೇ ಆದ ಕೃತಿಗಳೆಂದು ಪರಿಗಣಿಸಲಾಗುತ್ತದೆ.
ಮಹಾಭಾರತವು ವ್ಯಾಸ ಮುನಿಶ್ರೇಷ್ಠರಿಂದ ಮೂಲವಾಗಿ ರಚಿಸಲ್ಪಟ್ಟಿದೆ ಎಂದು ನಂಬಲಾಗಿದೆ. ಮಹಾಭಾರತವನ್ನು ಪಂಚಮವೇದವೆಂದು ಕರೆಯಲಾಗಿದೆ. ಶ್ರೀ ಕೃಷ್ಣನಿಂದ ಪಾರ್ಥನಾದ ಅರ್ಜುನನಿಗೆ ಉಪದೇಶಿಸಲ್ಪಟ್ಟ ಮಹಿಮಾನ್ವಿತವಾದ ಭಗವದ್ಗೀತೆಯನ್ನು ಮಹಾಭಾರತದ ಆತ್ಮ (ಅಂತರಾತ್ಮ) ಎನ್ನಲಾಗಿದೆ.