ರಾಷ್ಟ್ರಕೂಟ
ಕರ್ನಾಟಕದ ಪ್ರಮುಖ ರಾಜವಂಶ / From Wikipedia, the free encyclopedia
ರಾಷ್ಟ್ರಕೂಟರು ಕ್ರಿ.ಶ. ೮ ರಿಂದ ೧೦ನೇ ಶತಮಾನದವರೆಗೆ ದಖ್ಖನವನ್ನು ಆಳಿದ ರಾಜವಂಶ. ದಂತಿದುರ್ಗನಿಂದ ಮೊದಲುಗೊಂಡ ಇವರ ಮೂಲಸ್ಥಾನ ಲಟ್ಟಲೂರು ಆಗಿದ್ದು, ತದನಂತರ ತಮ್ಮ ರಾಜಧಾನಿ ಮಾನ್ಯಖೇಟದಿಂದ ಆಳ್ವಿಕೆ ನಡೆಸಿದರು.
ಧ್ರುವ ಧಾರಾವರ್ಷನ ಸಮಯದಲ್ಲಿ ರಾಷ್ಟ್ರಕೂಟ ಸಾಮ್ರಾಜ್ಯದ ವಿಸ್ತಾರ (ಕ್ರಿ.ಶ. ೭೮೦) | |
ವಂಶ
|
ಯಾದವ |
ರಾಜಧಾನಿಗಳು | ಮಯೂರಖಂಡ (ಬೀದರ್ ಜಿಲ್ಲೆ), ಮಾನ್ಯಖೇತ |
ಸರಕಾರ | ಚಕ್ರಾಧಿಪತ್ಯ |
ಮುಂಚಿನ ಆಡಳಿತ | ಬಾದಾಮಿ ಚಾಲುಕ್ಯರು |
ನಂತರದ ಆಡಳಿತ | ಪಶ್ಚಿಮ ಚಾಲುಕ್ಯರು |
ರಾಷ್ಟ್ರ ಎಂಬುದು ಪ್ರಾಂತ್ಯವಾಚಕ ಪದ. ಈ ಅರ್ಥದಲ್ಲಿ ಇದು ಅಶೋಕನ ಕಾಲದಿಂದ ರಾಜಕೀಯ ವ್ಯವಹಾರದಲ್ಲಿ ಬಳಕೆಯಾಯಿತು. ಅನಂತರ ಪ್ರಾಂತ್ಯಾಧಿಕಾರಿ ಎಂಬ ಅಭಿಪ್ರಾಯದಲ್ಲಿ ರಾಷ್ಟ್ರಕೂಟ ಎಂಬ ಪದವಿಸೂಚಕ ವಿಶಿಷ್ಟ ಪದ ಪ್ರಯೋಗವಾಗತೊಡಗಿತು. ಇಂಥ ಪ್ರಾಂತ್ಯಾಧಿಕಾರಿಗಳ ವಂಶದವರು ಉತ್ತರ ಮತ್ತು ದಕ್ಷಿಣ ಭಾರತದಲ್ಲಿ ಊರ್ಜಿತರಾದರು. ಸಮಸ್ತ ಭಾರತದಲ್ಲಿ ಖ್ಯಾತಿವೆತ್ತು ಭವ್ಯ ಪರಂಪರೆಯಿಂದ ಆಳಿದವರು ಮಳಖೇಡದ ರಾಷ್ಟ್ರಕೂಟರು. ಇವರ ಮೂಲಸ್ಥಳ ಹಿಂದೆ ಪ್ರಾಚೀನ ಕರ್ನಾಟಕದಲ್ಲಿ ಸಮಾವೇಶಗೊಂಡಿದ್ದು, ಅನಂತರ ಮಹಾರಾಷ್ಟ್ರದಲ್ಲಿ ಸೇರ್ಪಡೆಯಾದ ಲತ್ತನೂರು ಎಂದರೆ ಲಾತೂರು ಎಂಬ ಪಟ್ಟಣ. ರಾಷ್ಟ್ರಕೂಟ ಎಂಬ ಹೆಸರುವೆತ್ತ ಹಲವು ಅರಸು ಮನೆತನಗಳು ಭಾರತದ ನಾನಾ ಪ್ರದೇಶಗಳಲ್ಲಿ ಆಳಿದುವು. ಅವೆಲ್ಲ ಕರ್ನಾಟಕ ಮೂಲದವೇ ಆಗಿದ್ದುವು ಎಂಬುದು ಕೆಲವು ಇತಿಹಾಸ ಲೇಖಕರ ಅಭಿಪ್ರಾಯ.