ವಿದರ್ಭ
From Wikipedia, the free encyclopedia
ವಿದರ್ಭ (ಮರಾಠಿ: विदर्भ) ಮಹಾರಾಷ್ಟ್ರ ರಾಜ್ಯದ ಪೂರ್ವದಲ್ಲಿರುವ, ನಾಗಪುರ ಮತ್ತು ಅಮರಾವತಿ ವಿಭಾಗಗಳನ್ನು ಒಳಗೊಂಡ ಪ್ರದೇಶ. ಮಹಾರಾಷ್ಟ್ರ ದ 31.6%ರಷ್ಟು ವಿಸ್ತೀರ್ಣದ ವಿದರ್ಭದಲ್ಲಿ ಮಹಾರಾಷ್ಟ್ರ ಜನಸಂಖ್ಯೆಯ 21.3% ಜನಸಂಖ್ಯೆಯಿದೆ.[1]. ಇದು ಉತ್ತರಕ್ಕೆ ಮಧ್ಯ ಪ್ರದೇಶ, ಪೂರ್ವಕ್ಕೆ ಛತ್ತಿಸ್ಗಢ, ದಕ್ಷಿಣಕ್ಕೆ ಆಂಧ್ರ ಪ್ರದೇಶ ಮತ್ತು ಪಶ್ಚಿಮಕ್ಕೆ ಮಹಾರಾಷ್ಟ್ರದ ಮರಾಠವಾಡಾ ಮತ್ತು ಖಾಂದೇಶ್ ಪ್ರಾಂತ್ಯಗಳ ಜೊತೆಗೆ ಗಡಿಯನ್ನು ಹಂಚಿಕೊಂಡಿದೆ, ಭಾರತದ ಮಧ್ಯ ಭಾಗದಲ್ಲಿರುವ, ತನ್ನದೇ ಆದ ಶ್ರೀಮಂತ ಸಂಸ್ಕೃತಿ ಮತ್ತು ಐತಿಹಾಸಿಕ ಹಿನ್ನೆಲೆಯ ವಿದರ್ಭವು ಮಹಾರಾಷ್ಟ್ರ ಉಳಿದ ಪ್ರದೇಶಗಳಿಗಿಂತ ಭಿನ್ನವಾಗಿದೆ. ನಾಗಪುರ ವಿದರ್ಭದ ಅತಿದೊಡ್ಡ ನಗರ ಹಾಗೂ ಮಹಾರಾಷ್ಟ್ರ ದ ಎಅರಡಮನೆಯ ರಾಜಧಾನಿ. ಈ ಪ್ರದೇಶದ ಇತರ ನಗರಗಳೆಂದರೆ ಅಮರಾವತಿ,ಅಕೋಲಾ, ಯಾವತ್ಮಲ್, ಚಂದ್ರಪುರ ಮತ್ತು ಗೋಂಡಿಯಾ. ವಿದರ್ಭ ದಲ್ಲಿಯ ಹೆಚ್ಚಿನ ಜನರು ಮರಾಠಿಯ ಉಪಭಾಷೆಯಾದ ವರ್ಹಾಡಿ ಭಾಷೆಯನ್ನು ಮಾತನಾಡುತ್ತಾರೆ.
Vidarbha | |
Map of India with Vidarbha highlighted in red | |
ರಾಜ್ಯ | ಮಹಾರಾಷ್ಟ್ರ |
ವಿಸ್ತಾರ | 97321 km² |
ಸಮಯ ವಲಯ | IST (UTC+5:30) |
ಜನಸಂಖ್ಯೆ - ಸಾಂದ್ರತೆ |
20630987 - {{{population_density}}}/ಚದರ ಕಿ.ಮಿ. |
ಈ ಪ್ರದೇಶವು ಕಿತ್ತಳೆ ಮತ್ತು ಹತ್ತಿ ಬೆಳೆಯಲು ಪ್ರಸಿದ್ಧವಾಗಿದೆ. ವಿದರ್ಭವು ಮಹಾರಾಷ್ಟ್ರದ ಮೂರನೆಯ ಎರಡು ಭಾಗದಷ್ಟು ಖನಿಜ ಮೂಲವನ್ನು ಹೊಂದಿದ್ದು, ಮುಕ್ಕಾಲು ಭಾಗದಷ್ಟು ಅರಣ್ಯ ಸಂಪತ್ತಿನ ಮೂಲ ಮತ್ತು ವಿದ್ಯುತ್ ಉತ್ಪಾದನೆಗೆ ಮೂಲವಾಗಿದೆ[2]. ಇತಿಹಾಸವನ್ನು ಗಮನಿಸಿದರೆ ಇದು ಕೋಮು ಗಲಭೆಯ ಸಮಯಗಳಲ್ಲಿ ಭಾರತದ ಇತರ ಎಲ್ಲ ಭಾಗಗಳಿಗಿಂತ ಹೆಚ್ಚು ವಿದರ್ಭವು ಶಾಂತಿಯುತವಾಗಿತ್ತು. ಆದರೆ ವಿದರ್ಭದಲ್ಲಿ ಬಡತನ[3] ಮತ್ತು ಅಪೌಷ್ಟಿಕತೆ[4] ಯ ಕೊರತೆ ಇದೆ. ಮಹಾರಾಷ್ಟ್ರದ ಇತರೆ ಭಾಗಗಳಿಗೆ ಹೋಲಿಸಿದಾಗ ಇಲ್ಲಿ ಆರ್ಥಿಕತೆಯ ಬೆಳವಣಿಗೆಯು ಕಡಿಮೆ ಪ್ರಮಾಣದಲ್ಲಿ ಆಗುತ್ತಿದೆ.[5]
ಈ ಪ್ರದೇಶದ ಕುರಿತಾಗಿ ಮಹಾರಾಷ್ಟ ಸರ್ಕಾರ ತೋರುತ್ತಿರುವ ನಿರಂತರ ನಿರ್ಲಕ್ಷ್ಯದಿಂದಾಗಿ ವಿದರ್ಭವನ್ನು ಪ್ರತ್ಯೇಕ ರಾಜ್ಯವಾಗಿಸಬೇಕು ಎಂಬ ಕೂಗು ಕೇಳಿ ಬರುತ್ತಿದೆ. ಅಲ್ಲದೆ ಇಲ್ಲಿಯ ಕೆಲವೇ ಕೆಲವು ರಾಜಕಾರಣಿಗಳನ್ನು ಹೊರತು ಪಡಿಸಿದರೆ ಉಳಿದ ಅಸಮರ್ಥ ರಾಜಕೀಯ ನಾಯಕತ್ವ ಕೂಡ ಇಲ್ಲಿ ಅಭಿವೃದ್ಧಿ ಪ್ರಮಾಣ ಕಡಿಮೆಯಾಗಿರುವುದಕ್ಕೆ ಕಾರಣವಾಗಿದೆ. ಭಾರತದ ಇತರ ಭಾಗಗಳಿಗೆ ಹೋಲಿಸಿದರೆ ರಾಜ್ಯದಲ್ಲಿನ ರೈತರು ತುಂಬಾ ಕೆಟ್ಟ ಸ್ಥಿತಿಯಲ್ಲಿ ಬದುಕುತ್ತಿದ್ದಾರೆ. ಈ ದಶಕದಲ್ಲಿ ಮಹಾರಾಷ್ಟ್ರದಲ್ಲಿನ 32,000 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದರಲ್ಲಿ 70%ರಷ್ಟು ರೈತರು ವಿದರ್ಭದ 11 ಜಿಲ್ಲೆಗೆ ಸೇರಿದವರಾಗಿದ್ದಾರೆ[6]. ಖನಿಜ ಸಂಪತ್ತು, ಕಲ್ಲಿದ್ದಲು, ಅರಣ್ಯ ಸಂಪತ್ತು ಮತ್ತು ಪರ್ವತಗಳನ್ನು ಹೇರಳವಾಗಿ ಹೊಂದಿದ್ದರೂ ಈ ಪ್ರಾಂತ್ಯವು ಯಾವಾಗಲೂ ಹಿಂದುಳಿದಿದೆ ಏಕೆಂದರೆ ಪಶ್ಚಿಮ ಮಹಾರಾಷ್ಟ್ರದ ರಾಜಕೀಯ ನಾಯಕರ ನಿರಂತರ ಪ್ರಾಬಲ್ಯದಿಂದಾಗಿ ಇದರ ಬೆಳವಣಿಗೆ ಕುಂಠಿತವಾಗಿದೆ. ಮಹಾರಾಷ್ಟ್ರದ ಉಳಿದ ಪ್ರದೇಶಗಳಿಗಿಂತ ಸಾಂಸ್ಕೃತಿಕವಾಗಿ, ರಾಜಕೀಯ ಮತ್ತ್ತು ಆರ್ಥಿಕವಾಗಿ ವಿಭಿನ್ನವಾಗಿದ್ದರೂ, ಮಹಾರಾಷ್ಟ್ರ ಸರ್ಕಾರದಲ್ಲಿನ ಉನ್ನತಾಧಿಕಾರಿಗಳು ಈ ಪ್ರಾಂತದ ನಾಯಕರನ್ನು ಕಡೆಗಣಿಸಿದಾಗ ಮಾತ್ರ ಪ್ರತ್ಯೇಕ ರಾಜ್ಯದ ಕೂಗು ಕೇಳಿಬರುತ್ತದೆ[7]. ಪ್ರತ್ಯೇಕ ರಾಜ್ಯದ ಕೂಗೂ ಕೇಳಿಬರುತ್ತಿದ್ದರೂ ರಾಜ್ಯ ರಾಜಕೀಯದ ಪ್ರಮುಖ ಪಕ್ಷವಾದ ಶಿವಸೇನಾದ ವಿರೋಧದಿಂದಾಗಿ ಇದು ಕಲ್ಪನೆಯಾಗಿಯೇ ಉಳಿದಿದೆ.[8]