ಮುಖ್ಯ ಪುಟ
ವಿಕಿಮೀಡಿಯ ಯೋಜನೆಯ ಮುಖ್ಯ ಪುಟ / From Wikipedia, the free encyclopedia
ಕನ್ನಡ ವಿಕಿಪೀಡಿಯ ಕನ್ನಡದ ಒಂದು ಸ್ವತಂತ್ರ ವಿಶ್ವಕೋಶ
ಈ ವಿಶ್ವಕೋಶ ಬಹು ಭಾಷೆಗಳಲ್ಲಿ ಲಭ್ಯವಿದೆ.
ಪ್ರಸ್ತುತ ಕನ್ನಡ ಆವೃತ್ತಿಯು ೩೨,೪೯೧ ವಿಷಯಗಳ ಕುರಿತಾದ ಪುಟಗಳನ್ನು ಹೊಂದಿದೆ. |
|
ವಿಶೇಷ ಸೂಚನೆ: ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲಿ ಮಾತ್ರ ಬರೆಯಿರಿ.
ಸಾಮಾನ್ಯವಾಗಿ ಕೇಳಲಾಗುವ ಪ್ರಶ್ನೆಗಳು (FAQ)
ವಿಶೇಷ ಲೇಖನ
![Thumb image](http://upload.wikimedia.org/wikipedia/commons/d/d1/Kannada-alphabet-a.gif)
ನಮ್ಮ ಹೊಸ ಲೇಖನಗಳಿಂದ...
ಕನ್ನಡ ವಿಶ್ವಕೋಶದ ಸದಸ್ಯರಿಂದ ರಚಿಸಲ್ಪಟ್ಟ ಹೊಸ ಲೇಖನಗಳಿಂದ ಕೆಲವು ಸ್ವಾರಸ್ಯಕರ ಸಂಗತಿಗಳು:
- ವಂಶವೃಕ್ಷ_(ಕಾದಂಬರಿ) ೧೯೬೫ರಲ್ಲಿ ಬಿಡುಗಡೆಯಾದ ಡಾ. ಎಸ್.ಎಲ್. ಭೈರಪ್ಪನವರ ಕನ್ನಡ ಕಾದಂಬರಿ. ಸಮಾಜದ ಕಟ್ಟು ಪಾಡನ್ನು ಮುರಿದು ಹೊಸ ಜೀವನಕ್ಕೆ ನಾಂದಿ ಹಾಡುವ ಸಶಕ್ತ ಪಾತ್ರಗಳಿಂದ, ಖ್ಯಾತಿ ಪಡೆದ ಕೃತಿ.
- ಕಪ್ಪು ಶಿಲೀಂಧ್ರ ಮ್ಯೂಕೋರ್ಮೈಕೋಸಿಸ್ (ಕಪ್ಪು ಶಿಲೀಂದ್ರ) ಎನ್ನುವುದು ಶಿಲೀಂದ್ರಗಳಿಂದ ಉಂಟಾಗುವ ಸೋಂಕು. ಸಾಮಾನ್ಯವಾಗಿ ಮಣ್ಣು, ಹಳೆಯ ಕಟ್ಟಡಗಳ ಮೇಲೆ ಒದ್ದೆಯಾದ ಗೋಡೆಗಳು ಇತ್ಯಾದಿಗಳಿಂದ ಈ ಸೋಂಕು ಹರಡುತ್ತದೆ.
- ಅಭಿನಂದನ್ ವರ್ಧಮಾನ್ ೨೦೧೯ರ ಫೆಬ್ರವರಿ ೨೬ರಂದು ಭಾರತೀಯ ವಾಯುಸೇನೆಯು ಬಾಲಕೋಟ್ ಭಯೋತ್ಪಾದಕ ಶಿಬಿರದ ಮೇಲೆ ನಡೆಸಿದ ವಾಯುದಾಳಿಗೆ ಪ್ರತಿಯಾಗಿ, ಭಾರತೀಯ ಸೇನಾನೆಲೆಗಳ ಮೇಲೆ ಪಾಕಿಸ್ತಾನದ ವಾಯುಸೇನೆಯು ೨೭ನೇ ಫೆಬ್ರವರಿ ೨೦೧೯ರಂದು ವಿಫಲ ದಾಳಿಯನ್ನು ನಡೆಸಿದ ಸಂದರ್ಭದಲ್ಲಿ, ಪಾಕ್ ಯುದ್ಧವಿಮಾನವನ್ನು ಅಟ್ಟಿಸಿಕೊಂಡು ಹೋಗಿ, ಪಾಕಿ ವಾಯುಸೇನೆಯ, ಅಮೇರಿಕಾ ನಿರ್ಮಿತ ಎಫ್- ೧೬ ವಿಮಾನವನ್ನು, ಮಿಗ್-೨೧ ಬೈಸನ್ ವಿಮಾನದ ಸಹಾಯದಿಂದ ಹೊಡೆದುರುಳಿಸಿದ ಸಾಹಸಿ ಸೈನಿಕ.
- ಕೊವ್ಯಾಕ್ಸಿನ್ (ಅಧೀಕೃತ ಹೆಸರು ಬಿಬಿವಿ೧೫೨) ಕೊರೊನಾ ವೈರಸ್ ಖಾಯಿಲೆಯ ಉಪಶಮನಕ್ಕಾಗಿ ನೀಡಲಾಗುವ ಒಂದು ಲಸಿಕೆ. ಇದನ್ನು, ನಿಷ್ಕ್ರಿಯಗೊಳಿಸಿದ ವೈರಸ್ಸಿನ ಸಹಾಯದಿಂದ ತಯಾರಿಸಲಾಗಿದ್ದು, ಭಾರತ್ ಬಯೋಟೆಕ್ ಸಂಸ್ಥೆಯು, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದೆ.
- ಸಿಗಡಿ ಕೃಷಿ ಯು ಮನುಷ್ಯನ ಆಹಾರಕ್ಕಾಗಿ, ಜಲಚರಗಳನ್ನು ಸಾಕುವ ಉದ್ಯಮವಾಗಿದೆ. ಸಿಗಡಿ ಕೃಷಿಯು ಆಗ್ನೇಯ ಏಷಿಯಾದಲ್ಲಿ ಸಾಂಪ್ರದಾಯಿಕ ಸಣ್ಣ ಪ್ರಮಾಣದ ಉದ್ದಿಮೆಯಾಗಿ ಆರಂಭವಾಗಿ, ಇಂದು ಜಾಗತಿಕ ಉದ್ದಿಮೆಯೆನ್ನುವ ಮಟ್ಟಕ್ಕೆ ಬೆಳೆದಿದೆ.
- ವರಾಹ ಉಪನಿಷತ್ತು೧೩ ನೇ ಮತ್ತು ೧೬ ನೇ ಶತಮಾನದ ನಡುವೆ ಸಂಯೋಜಿಸಲ್ಪಟ್ಟ ಹಿಂದೂ ಧರ್ಮದ ಒಂದು ಚಿಕ್ಕ ಉಪನಿಷತ್ ಆಗಿದೆ. ಇದನ್ನು ಸಂಸ್ಕೃತದಲ್ಲಿ ರಚಿಸಲಾಗಿದೆ ಹಾಗೂ ಇದನ್ನು ಕೃಷ್ಣ ಯಜುರ್ವೇದದ ೩೨ ಉಪನಿಷತ್ತುಗಳಲ್ಲಿ ಒಂದೆಂದು ಪಟ್ಟಿ ಮಾಡಲಾಗಿದೆ ಮತ್ತು ೨೦ ಯೋಗ ಉಪನಿಷತ್ತುಗಳಲ್ಲಿ ಒಂದೆಂದು ವರ್ಗೀಕರಿಸಲಾಗಿದೆ.
ಸುದ್ದಿಯಲ್ಲಿ
- ಜುಲೈ ೩೦: ಪ್ಯಾರೀಸ್ ಒಲಿಂಪಿಕ್ನಲ್ಲಿ ಭಾರತಕ್ಕೆ ಎರಡನೆಯ ಪದಕ, ಶೂಟರ್ಗಳಾದ ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ಗೆ ಕಂಚು.
- ಜುಲೈ ೨೮: ಪ್ಯಾರೀಸ್ ಒಲಿಂಪಿಕ್ನಲ್ಲಿ ಭಾರತಕ್ಕೆ ಮೊದಲ ಪದಕ, ಶೂಟರ್ ಮನು ಭಾಕರ್(ಚಿತ್ರಿತ)ಗೆ ಕಂಚು
- ಜುಲೈ ೨೬: ಜುಲೈ ೨೬ರಿಂದ ಒಲಿಂಪಿಕ್ ಕ್ರೀಡಾಕೂಟಗಳಿಗೆ ಅಧೀಕೃತ ಚಾಲನೆ.
- ಜುಲೈ ೨೬: ವೈದ್ಯಕೀಯ ಪ್ರವೇಶ ಪರೀಕ್ಷೆ(ನೀಟ್)ಯ ಅಂತಿಮ ಫಲಿತಾಂಶ ಪಟ್ಟಿ ಪ್ರಕಟ
- ಜುಲೈ ೨೬: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ಆಯ್ಕೆ
ಈ ತಿಂಗಳ ಪ್ರಮುಖ ದಿನಗಳು
ಜುಲೈ:
- ಜುಲೈ ೧: ವೈದ್ಯರ ದಿನ
- ಜುಲೈ ೨: ೧೯೭೬ರಲ್ಲಿ ವಿಯೆಟ್ನಾಮ್ ದೇಶದ ಉತ್ತರ ಮತ್ತು ದಕ್ಷಿಣ ಭಾಗಗಳ ಏಕೀಕರಣ.
- ಜುಲೈ ೪: ಅಮೇರಿಕ ಸಂಯುಕ್ತ ಸಂಸ್ಥಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ.
- ಜುಲೈ ೧೧:ವಿಶ್ವ ಜನಸಂಖ್ಯಾ ದಿನ
- ಜುಲೈ ೧೨: ಕನ್ನಡ ಕುಲ ಪುರೋಹಿತ ಹಾಗೂ ಕನ್ನಡ ಏಕೀಕರಣದ ರೂವಾರಿ ಆಲೂರು ವೆಂಕಟರಾಯರ ಜನುಮ ದಿನ.
- ಜುಲೈ ೧೩: ರೋಮ್ ಗಣರಾಜ್ಯದ ಅಧಿಪತಿ ಜೂಲಿಯಸ್ ಸೀಜರ್ ಹುಟ್ಟಿದ ದಿನ
- ಜುಲೈ ೧೪: ಫ್ರೆಂಚ್ ಕ್ರಾಂತಿಯ ವಾರ್ಷಿಕೋತ್ಸವದ ಆಚರಣೆಯಾದ ಬ್ಯಾಸ್ಟಿಲ್ ದಿನಾಚರಣೆ.
- ಜುಲೈ ೧೬: ವಿಶ್ವ ಹಾವು ದಿನ
- ಜುಲೈ ೧೭: ಕನ್ನಡದ ಹೆಸರಾಂತ ನಟಿಯಾಗಿದ್ದ ದಿ॥ಕಲ್ಪನಾರ ಜನುಮ ದಿನ.
- ಜುಲೈ ೧೯: ಪ್ರಮುಖವಾಗಿ ಹಿಂದೂಗಳು ಗುರುಗಳಿಗೆ ವಂದಿಸುವ ದಿನ ಗುರು ಪೂರ್ಣಿಮಾ
- ಜುಲೈ ೨೦: ಅಪೋಲೊ ೧೧ರ ಗಗನಯಾನಿಗಳು (ಚಿತ್ರಿತ) ನೀಲ್ ಆರ್ಮ್ಸ್ಟ್ರಾಂಗ್ ಮತ್ತು ಬಜ್ ಆಲ್ಡ್ರಿನ್ ಚಂದ್ರನ ಮೇಲೆ ಕಾಲಿಟ್ಟ ಮೊದಲ ಮಾನವರಾದರು.
- ಜುಲೈ ೨೪: ಎಕ್ವಡಾರ್ ಮತ್ತು ವೆನೆಜುವೆಲಾ ದೇಶಗಳಲ್ಲಿ ಸಿಮೋನ್ ಬೊಲಿವಾರ್ ದಿನಾಚರಣೆ.
- ಜುಲೈ ೨೬: ಕಾರ್ಗಿಲ್ ವಿಜಯ ದಿನ
- ಜುಲೈ ೨೮: ೧೯೧೪ರಲ್ಲಿ ಆಸ್ಟ್ರಿಯ-ಹಂಗೆರಿಯು ಸೆರ್ಬಿಯಾದ ಮೇಲೆ ಯುದ್ಧವನ್ನು ಘೋಷಿಸಿ ಮೊದಲನೇ ವಿಶ್ವಯುದ್ಧ ಪ್ರಾರಂಭವಾಯಿತು.
- ಜುಲೈ ೨೯: ಆಧುನಿಕ ರಂಗಭೂಮಿಯ ಹರಿಕಾರ ಎಂದು ಪ್ರಸಿದ್ದಿಯಾಗಿದ್ದ ಟಿ.ಪಿ.ಕೈಲಾಸಂ ಜನುಮ ದಿನ.
- ಜುಲೈ ೨೯: ೧೯೪೭ರಲ್ಲಿ ಪ್ರಪಂಚದ ಮೊದಲ ಸಾಮಾನ್ಯ ಬಳಕೆಯ ಗಣಕಯಂತ್ರವಾದ ಎನಿಯಾಕ್(ENIAC) ಅಮೇರಿಕ ದೇಶದಲ್ಲಿ ಚಾಲನೆಗೆ ಬಂದಿತು.