ಮುಖ್ಯ ಪುಟ
ವಿಕಿಮೀಡಿಯ ಯೋಜನೆಯ ಮುಖ್ಯ ಪುಟ / From Wikipedia, the free encyclopedia
ಕನ್ನಡ ವಿಕಿಪೀಡಿಯ ಕನ್ನಡದ ಒಂದು ಸ್ವತಂತ್ರ ವಿಶ್ವಕೋಶ
ಈ ವಿಶ್ವಕೋಶ ಬಹು ಭಾಷೆಗಳಲ್ಲಿ ಲಭ್ಯವಿದೆ.
ಪ್ರಸ್ತುತ ಕನ್ನಡ ಆವೃತ್ತಿಯು ೩೨,೫೫೯ ವಿಷಯಗಳ ಕುರಿತಾದ ಪುಟಗಳನ್ನು ಹೊಂದಿದೆ. |
|
ವಿಶೇಷ ಸೂಚನೆ: ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲಿ ಮಾತ್ರ ಬರೆಯಿರಿ.
ಸಾಮಾನ್ಯವಾಗಿ ಕೇಳಲಾಗುವ ಪ್ರಶ್ನೆಗಳು (FAQ)
ವಿಶೇಷ ಲೇಖನ
ಕನ್ನಡ ಅಕ್ಷರಮಾಲೆಯು ಬ್ರಾಹ್ಮಿ ಲಿಪಿಯಿಂದ ಬೆಳೆದು ಬಂದಿದೆ. ಇದನ್ನು ಸ್ವರಗಳು, ಅನುಸ್ವಾರ, ವಿಸರ್ಗ, ವ್ಯಂಜನಗಳು, ಅವರ್ಗೀಯ ವ್ಯಂಜನಗಳೆಂದು ವಿಭಾಗಿಸಲಾಗಿದೆ. ಕನ್ನಡ ಅಕ್ಷರಮಾಲೆಯನ್ನು ಕನ್ನಡ ವರ್ಣಮಾಲೆಯೆಂದು ಕರೆಯಲಾಗುತ್ತದೆ. ನಾವು ಮಾತನಾಡುವ ಮಾತುಗಳೆಲ್ಲ ವಾಕ್ಯ ವಾಕ್ಯಗಳಾಗಿರುತ್ತವೆ. ವಾಕ್ಯಗಳು ಪದಗಳಿಂದ ಕೂಡಿರುತ್ತವೆ. ಪದಗಳು ಅಕ್ಷರಗಳಿಂದ ಕೂಡಿರುತ್ತವೆ. ಉದಾಹರಣೆಗೆ, ನಾನು ಶಾಲೆಗೆ ಹೋಗಿ ಬರುವೆನು. ಈ ವಾಕ್ಯದಲ್ಲಿ ನಾನು, ಶಾಲೆಗೆ, ಹೋಗಿ, ಬರುವೆನು, ಹೀಗೆ ನಾಲ್ಕು ಪದಗಳಿವೆ. ಒಂದೊಂದು ಪದದಲ್ಲೂ ಹಲವು ಅಕ್ಷರಗಳಿವೆ. ನಾನು ಎಂಬ ಪದದಲ್ಲಿ ನ್+ಆ+ನ್+ಉ ಎಂಬ ಧ್ವನಿಮಾ ವ್ಯವಸ್ಥೆಯ ಬೇರೆ ಬೇರೆ ಅಕ್ಷರಗಳಿವೆ. ಹೀಗೆ ಕನ್ನಡ ಭಾಷೆಯನ್ನು ಮಾತನಾಡುವಾಗ ಬಳಸುವ ಅಕ್ಷರಗಳ ಮಾಲೆಗೆ ವರ್ಣಮಾಲೆ ಅಥವಾ ಅಕ್ಷರಮಾಲೆ ಎಂದು ಕರೆಯುತ್ತೇವೆ.
ನಮ್ಮ ಹೊಸ ಲೇಖನಗಳಿಂದ...
ಕನ್ನಡ ವಿಶ್ವಕೋಶದ ಸದಸ್ಯರಿಂದ ರಚಿಸಲ್ಪಟ್ಟ ಹೊಸ ಲೇಖನಗಳಿಂದ ಕೆಲವು ಸ್ವಾರಸ್ಯಕರ ಸಂಗತಿಗಳು:
- ವಂಶವೃಕ್ಷ_(ಕಾದಂಬರಿ) ೧೯೬೫ರಲ್ಲಿ ಬಿಡುಗಡೆಯಾದ ಡಾ. ಎಸ್.ಎಲ್. ಭೈರಪ್ಪನವರ ಕನ್ನಡ ಕಾದಂಬರಿ. ಸಮಾಜದ ಕಟ್ಟು ಪಾಡನ್ನು ಮುರಿದು ಹೊಸ ಜೀವನಕ್ಕೆ ನಾಂದಿ ಹಾಡುವ ಸಶಕ್ತ ಪಾತ್ರಗಳಿಂದ, ಖ್ಯಾತಿ ಪಡೆದ ಕೃತಿ.
- ಕಪ್ಪು ಶಿಲೀಂಧ್ರ ಮ್ಯೂಕೋರ್ಮೈಕೋಸಿಸ್ (ಕಪ್ಪು ಶಿಲೀಂದ್ರ) ಎನ್ನುವುದು ಶಿಲೀಂದ್ರಗಳಿಂದ ಉಂಟಾಗುವ ಸೋಂಕು. ಸಾಮಾನ್ಯವಾಗಿ ಮಣ್ಣು, ಹಳೆಯ ಕಟ್ಟಡಗಳ ಮೇಲೆ ಒದ್ದೆಯಾದ ಗೋಡೆಗಳು ಇತ್ಯಾದಿಗಳಿಂದ ಈ ಸೋಂಕು ಹರಡುತ್ತದೆ.
- ಅಭಿನಂದನ್ ವರ್ಧಮಾನ್ ೨೦೧೯ರ ಫೆಬ್ರವರಿ ೨೬ರಂದು ಭಾರತೀಯ ವಾಯುಸೇನೆಯು ಬಾಲಕೋಟ್ ಭಯೋತ್ಪಾದಕ ಶಿಬಿರದ ಮೇಲೆ ನಡೆಸಿದ ವಾಯುದಾಳಿಗೆ ಪ್ರತಿಯಾಗಿ, ಭಾರತೀಯ ಸೇನಾನೆಲೆಗಳ ಮೇಲೆ ಪಾಕಿಸ್ತಾನದ ವಾಯುಸೇನೆಯು ೨೭ನೇ ಫೆಬ್ರವರಿ ೨೦೧೯ರಂದು ವಿಫಲ ದಾಳಿಯನ್ನು ನಡೆಸಿದ ಸಂದರ್ಭದಲ್ಲಿ, ಪಾಕ್ ಯುದ್ಧವಿಮಾನವನ್ನು ಅಟ್ಟಿಸಿಕೊಂಡು ಹೋಗಿ, ಪಾಕಿ ವಾಯುಸೇನೆಯ, ಅಮೇರಿಕಾ ನಿರ್ಮಿತ ಎಫ್- ೧೬ ವಿಮಾನವನ್ನು, ಮಿಗ್-೨೧ ಬೈಸನ್ ವಿಮಾನದ ಸಹಾಯದಿಂದ ಹೊಡೆದುರುಳಿಸಿದ ಸಾಹಸಿ ಸೈನಿಕ.
- ಕೊವ್ಯಾಕ್ಸಿನ್ (ಅಧೀಕೃತ ಹೆಸರು ಬಿಬಿವಿ೧೫೨) ಕೊರೊನಾ ವೈರಸ್ ಖಾಯಿಲೆಯ ಉಪಶಮನಕ್ಕಾಗಿ ನೀಡಲಾಗುವ ಒಂದು ಲಸಿಕೆ. ಇದನ್ನು, ನಿಷ್ಕ್ರಿಯಗೊಳಿಸಿದ ವೈರಸ್ಸಿನ ಸಹಾಯದಿಂದ ತಯಾರಿಸಲಾಗಿದ್ದು, ಭಾರತ್ ಬಯೋಟೆಕ್ ಸಂಸ್ಥೆಯು, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದೆ.
- ಸಿಗಡಿ ಕೃಷಿ ಯು ಮನುಷ್ಯನ ಆಹಾರಕ್ಕಾಗಿ, ಜಲಚರಗಳನ್ನು ಸಾಕುವ ಉದ್ಯಮವಾಗಿದೆ. ಸಿಗಡಿ ಕೃಷಿಯು ಆಗ್ನೇಯ ಏಷಿಯಾದಲ್ಲಿ ಸಾಂಪ್ರದಾಯಿಕ ಸಣ್ಣ ಪ್ರಮಾಣದ ಉದ್ದಿಮೆಯಾಗಿ ಆರಂಭವಾಗಿ, ಇಂದು ಜಾಗತಿಕ ಉದ್ದಿಮೆಯೆನ್ನುವ ಮಟ್ಟಕ್ಕೆ ಬೆಳೆದಿದೆ.
- ವರಾಹ ಉಪನಿಷತ್ತು೧೩ ನೇ ಮತ್ತು ೧೬ ನೇ ಶತಮಾನದ ನಡುವೆ ಸಂಯೋಜಿಸಲ್ಪಟ್ಟ ಹಿಂದೂ ಧರ್ಮದ ಒಂದು ಚಿಕ್ಕ ಉಪನಿಷತ್ ಆಗಿದೆ. ಇದನ್ನು ಸಂಸ್ಕೃತದಲ್ಲಿ ರಚಿಸಲಾಗಿದೆ ಹಾಗೂ ಇದನ್ನು ಕೃಷ್ಣ ಯಜುರ್ವೇದದ ೩೨ ಉಪನಿಷತ್ತುಗಳಲ್ಲಿ ಒಂದೆಂದು ಪಟ್ಟಿ ಮಾಡಲಾಗಿದೆ ಮತ್ತು ೨೦ ಯೋಗ ಉಪನಿಷತ್ತುಗಳಲ್ಲಿ ಒಂದೆಂದು ವರ್ಗೀಕರಿಸಲಾಗಿದೆ.
ಸುದ್ದಿಯಲ್ಲಿ
- ಆಗಸ್ಟ್ ೧೦: ಪ್ಯಾರಿಸ್ ಒಲಿಂಪಿಕ್ಸ್ ೨೦೨೪- ಕುಸ್ತಿಯಲ್ಲಿ ಕಂಚು ಗೆದ್ದ ಭಾರತದ ಅಮನ್ ಸೆಹ್ರಾವತ್
- ಆಗಸ್ಟ್ ೧೦: ಇನ್ನು ಮುಂದೆ ಒಂದು ಬ್ಯಾಂಕ್ ಖಾತೆಗೆ ೪ ನಾಮನಿರ್ದೇಶನಕ್ಕೆ ಅವಕಾಶ-ಮಸೂದೆ ತಿದ್ದುಪಡಿ
- ಆಗಸ್ಟ್ ೯: ಸತತ ೯ನೇ ಬಾರಿಗೆ ರೆಪೋ ದರ ಕಾಯ್ದುಕೊಂಡ ಆರ್ಬಿಐ
- ಆಗಸ್ಟ್ ೯: ಬಾಂಗ್ಲಾದೇಶದಲ್ಲಿ ಮೊಹಮ್ಮದ್ ಯೂನುಸ್ (ಚಿತ್ರಿತ) ನೇತೃತ್ವದ ಮಧ್ಯಂತರ ಸರ್ಕಾರ ಅಸ್ತಿತ್ವಕ್ಕೆ
ಈ ತಿಂಗಳ ಪ್ರಮುಖ ದಿನಗಳು
- ಆಗಸ್ಟ್ ೧: ೧೯೦೭ರಲ್ಲಿ ಇಂಗ್ಲೆಂಡ್ನಲ್ಲಿ ರಾಬರ್ಟ್ ಬಾಡೆನ್-ಪೊವೆಲ್ ಸ್ಕೌಟ್ ಶಿಬಿರವನ್ನು ಪ್ರಾರಂಭಿಸಿ ಸ್ಕೌಟ್ ಚಳುವಳಿಗೆ ನಾಂದಿ ಹಾಕಿದರು, ವಿಶ್ವ ಎದೆಹಾಲು ದಿನ.
- ಆಗಸ್ಟ್ ೨: ಕ್ರಿ.ಪೂ. ೨೧೬ರಲ್ಲಿ ಹ್ಯಾನಿಬಾಲ್ ನೇತೃತ್ವದ ಕಾರ್ಥೇಜ್ನ ಸೇನೆ ಎರಡನೇ ಪ್ಯೂನಿಕ್ ಯುದ್ಧದಲ್ಲಿ ರೋಮ್ ಗಣರಾಜ್ಯವನ್ನು ಸೋಲಿಸಿತು.
- ಆಗಸ್ಟ್ ೬: ೧೯೪೫ರಲ್ಲಿ ಎರಡನೇ ವಿಶ್ವಯುದ್ಧದಲ್ಲಿ ಅಮೇರಿಕ ದೇಶದ ವಾಯುಸೇನೆಯು ಜಪಾನಿನ ಹಿರೋಶಿಮ ನಗರದ ಮೇಲೆ ಮೊದಲ ಅಣು ಬಾಂಬ್ ಉಪಯೋಗಿಸಿತು (ಚಿತ್ರಿತ).
- ಆಗಸ್ಟ್ ೮: ಸ್ನೇಹ ದಿನಾಚರಣೆ
- ಆಗಸ್ಟ್ ೯: ಸಂಸ್ಕೃತ ದಿನ, ನಾಗಾಸಾಕಿ ದಿನ, ಕ್ವಿಟ್ ಇಂಡಿಯಾ ದಿನ, ೧೯೭೪ರಲ್ಲಿ ಅಮೇರಿಕ ದೇಶದ ರಾಷ್ಟ್ರಪತಿಯಾಗಿದ್ದ ರಿಚರ್ಡ್ ನಿಕ್ಸನ್ ವಾಟರ್ಗೇಟ್ ಘಟನೆಯಿಂದ ರಾಜೀನಾಮೆ ನೀಡಿದರು.
- ಆಗಸ್ಟ್ ೯: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ದಿ॥ವಿನಾಯಕ ಕೃಷ್ಣ ಗೋಕಾಕ್ ರವರ ಜನ್ಮ ದಿನ.
- ಆಗಸ್ಟ್ ೧೨: ವಿಶ್ವ ಆನೆಗಳ ದಿನ
- ಆಗಸ್ಟ್ ೧೩: ವಿಶ್ವ ಎಡಗೈಯವರ ದಿನ
- ಆಗಸ್ಟ್ ೧೫: ೧೯೪೭ರಲ್ಲಿ ಬ್ರಿಟೀಷ್ ರಾಜ್ಯ ಇಬ್ಬಾಗಗೊಂಡು ಭಾರತವು ಸ್ವಾತಂತ್ರ್ಯ ಪಡೆಯಿತು.
- ಆಗಸ್ಟ್ ೧೯: ವಿಶ್ವ ಛಾಯಾಗ್ರಹಣ ದಿನ
- ಆಗಸ್ಟ್ ೨೨: ೧೭೯೧ರಲ್ಲಿ ಹೈತಿಯಲ್ಲಿ ಗುಲಾಮರು ದಂಗೆಯೆದ್ದು ಹೈತಿ ಕ್ರಾಂತಿಯ ಪ್ರಾರಂಭ.
- ಆಗಸ್ಟ್ ೨೪: ಹಿಂದುಗಳಿಗೆ ವರಮಹಾಲಕ್ಷ್ಮಿ ವ್ರತ
- ಆಗಸ್ಟ್ ೨೪: ಓಣಂ
- ಆಗಸ್ಟ್ ೨೮: ನಾಗರೀಕ ಹಕ್ಕು ದಿನ
- ಆಗಸ್ಟ್ ೨೯: ರಾಷ್ಟ್ರೀಯ ಕ್ರೀಡಾ ದಿನ