ಶ್ರೀನಿವಾಸ ರಾಮಾನುಜನ್
ಗಣಿತಜ್ಞ / From Wikipedia, the free encyclopedia
ಶ್ರೀನಿವಾಸ ರಾಮಾನುಜನ್ (ಪೂರ್ಣ ಹೆಸರು - ಶ್ರೀನಿವಾಸ ರಾಮಾನುಜನ್ ಅಯ್ಯಂಗಾರ್)[1][2][3] (ಡಿಸೆಂಬರ್ ೨೨, ೧೮೮೭ - ಏಪ್ರಿಲ್ ೨೬, ೧೯೨೦) ವಿಶ್ವದಲ್ಲಿ ಶ್ರೇಷ್ಠ ಭಾರತೀಯ ಗಣಿತಜ್ಞರೆಂದು ಪ್ರಖ್ಯಾತರಾಗಿದ್ದಾರೆ. “ಪ್ರತಿ ಧನಪೂರ್ಣಾಂಶವೂ ರಾಮಾನುಜನ್ನರ ವೈಯಕ್ತಿಕ ಮಿತ್ರರುಗಳಲ್ಲೊಂದು” ಎಂಬುದು ಲೋಕದಲ್ಲಿ ವಿಖ್ಯಾತ ನುಡಿ. ಅವರಿಗೆ “ಸಂಖ್ಯೆಗಳ ವೈಲಕ್ಷಣಗಳನ್ನು ನಂಬಲಸಾಧ್ಯವಾದಂಥ ರೀತಿಯಲ್ಲಿ ನೆನಪಿಡುವ’ ಅಪೂರ್ವ ಸಾಮರ್ಥ್ಯವಿತ್ತು.
ಶ್ರೀನಿವಾಸ ರಾಮಾನುಜನ್ | |
---|---|
ಜನನ | (೧೮೮೭-೧೨-೨೨)೨೨ ಡಿಸೆಂಬರ್ ೧೮೮೭ ಈರೋಡ್, ಮದ್ರಾಸ್ ಪ್ರೆಸಿಡೆನ್ಸಿ |
ಮರಣ | 26 April 1920(1920-04-26) (aged 32) ಚೆಟ್ಪುಟ್, ಮದ್ರಾಸ್, ಮದ್ರಾಸ್ ಪ್ರೆಸಿಡೆನ್ಸಿ |
ವಾಸಸ್ಥಳ | ಕುಂಬಕೋಣಂ |
ರಾಷ್ಟ್ರೀಯತೆ | ಭಾರತೀಯ |
ಕಾರ್ಯಕ್ಷೇತ್ರ | ಗಣಿತಶಾಸ್ತ್ರ |
ಅಭ್ಯಸಿಸಿದ ವಿದ್ಯಾಪೀಠ | Government Arts College en:Pachaiyappa's College |
ಶೈಕ್ಷಣಿಕ ಸಲಹೆಗಾರರು | en:G. H. Hardy J. E. Littlewood |
ಪ್ರಸಿದ್ಧಿಗೆ ಕಾರಣ | en:Landau–Ramanujan constant en:Mock theta functions en:Ramanujan conjecture en:Ramanujan prime en:Ramanujan–Soldner constant en:Ramanujan theta function en:Ramanujan's sum en:Rogers–Ramanujan identities en:Ramanujan's master theorem |
ಪ್ರಭಾವಗಳು | ಜಿ. ಎಚ್. ಹಾರ್ಡಿ |
ಹಸ್ತಾಕ್ಷರ |
ಜೇಮ್ಸ್ ಆರ್. ನ್ಯೂಮನವರ "ದ ವರ್ಲ್ಡ್ ಆಫ್ ಮ್ಯಾಥಮೆಟಿಕ್ಸ್" ಎಂಬ ನಾಲ್ಕು ಸಂಪುಟಗಳ ಚಿರಸ್ಥಾಯಿ ಉದ್ಗ್ರಂಥದಲ್ಲಿ ರಾಮಾನುಜನ್ನರ ಕುರಿತು ಈ ಉಲ್ಲೇಖವಿದೆ. ಶುದ್ಧ ಗಣಿತದ ಬತ್ತಳಿಕೆಯಲ್ಲಿ ವಿಶ್ಲೇಷಣಾ ಆಯುಧಗಳ ಭಾರೀ ಸಂಗ್ರಹವಿದೆ ಮತ್ತು ಎಲ್ಲ ಸರಳತೆ ಗತಕಾಲದ ವಿಚಾರವೆಂದು ತಿಳಿಯುತ್ತಿದ್ದ ಆ ದಿನಗಳಲ್ಲಿ “ಈ ಎಲ್ಲ ಪರಿಕರಗಳ ನೆರವಿಲ್ಲದೆಯೇ ಹೊಸ ವಿಚಾರಗಳನ್ನು ಮಂಡಿಸಬಲ್ಲ ಒಬ್ಬ ಜೀನಿಯಸ್ ಉದಯಿಸಿದರು”. ನ್ಯೂಮನರು ಮುಂದುವರಿಸಿ, “ಶ್ರೀನಿವಾಸ ರಾಮಾನುಜನ್ನರ ಜೀವನ ಒಂದು ಯುಗಾರಂಭವನ್ನು ಸೂಚಿಸುತ್ತದೆ. ಭಾರತದಲ್ಲಿ ವಿವಿಧ ಕಾಲ ಘಟ್ಟಗಳಲ್ಲಿ ಉನ್ನತ ಪ್ರತಿಭೆಯ ಗಣಿತಜ್ಞರಿದ್ದರು. ಕಾಲಾನುಕ್ರಮದಲ್ಲಿ ಅಂಥವರನ್ನು ಕೊನೆಯ ಗ್ರೀಕ್ ಕಾಲದವರೆಗೆ ಗುರುತಿಸಬಹುದು. ಆದರೆ ಉತ್ತುಂಗತೆಯ ನಿರಪೇಕ್ಷಮಾನದಿಂದ ಅಳೆದಾಗ ಪೌರ್ವಾತ್ಯ ಗಣಿತಜ್ಞರಲ್ಲೆಲ್ಲಾ, ರಾಮಾನುಜನ್ನರ ಮೇಧಾವಿ ಅತ್ಯುಚ್ಛವೆಂದೆನಿಸುತ್ತದೆ” ಎಂದು ಹೇಳಿದ್ದಾರೆ.
ಶ್ರೀನಿವಾಸ ರಾಮಾನುಜನ್ನರ ಬಗ್ಗೆ ಬರೆಯುತ್ತ ಜವಾಹರಲಾಲ್ ನೆಹರೂರವರು ತಮ್ಮ "ದ ಡಿಸ್ಕವರಿ ಆಫ್ ಇಂಡಿಯಾ"ದಲ್ಲಿ ಹೀಗೆ ನುಡಿಯುತ್ತಾರೆ: “ಭಾರತದಲ್ಲಿ ಗಣಿತದ ವಿಚಾರದಲ್ಲಿ, ಇತ್ತೀಚಿಗಿನ ಒಬ್ಬರು ಅಸಾಧಾರಣ ವ್ಯಕ್ತಿಯನ್ನು ಕುರಿತು ಯೋಚಿಸುವುದು ಅನಿವಾರ್ಯವಾಗುವಂತೆ ಮಾಡುತ್ತದೆ. ಅವರೇ ಶ್ರೀನಿವಾಸ ರಾಮಾನುಜನ್. ದಕ್ಷಿಣ ಭಾರತದ ಒಂದು ಬಡ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿ ಸೂಕ್ತ ವಿದ್ಯಾಭ್ಯಾಸಕ್ಕೆ ಅವಕಾಶಗಳಿಲ್ಲದೆ ಅವರು ಮದ್ರಾಸ್ ಪೋರ್ಟ್ ಟ್ರಸ್ಟ್ನಲ್ಲಿ ಒಬ್ಬ ಕಾರಕೂನರಾದರು. ಆದರೆ ಅವರು ಸಹಜ ಪ್ರತಿಭೆಯ ಯಾವುದೋ ತಡೆಯಲಾಗದ ಲಕ್ಷಣಗಳಿಂದ ಬುದ್ಬುದಿಸುತ್ತಿದ್ದರು; ಸಂಖ್ಯೆ ಹಾಗೂ ಸಮೀಕರಣಗಳೊಂದಿಗೆ ಅವರು ಬಿಡುವಿನ ಸಮಯದಲ್ಲಿ ಆಟವಾಡುತ್ತಿದ್ದರು. ಮುಂದೆ ಅವರು ಕೇಂಬ್ರಿಜ್ಗೆ ತೆರಳಿ ಅಲ್ಲಿ ಬಹಳ ಅಲ್ಪಾವಧಿಯಲ್ಲೇ ಮೂಲಭೂತ ಮೌಲ್ಯದ ಹಾಗೂ ವಿಸ್ಮಯಕರ ಸ್ವಂತಿಕೆಯ ಕಾರ್ಯವೆಸಗಿದರು. ಇಂಗ್ಲೆಂಡಿನ ರಾಯಲ್ ಸೊಸೈಟಿ ತನ್ನ ನಿಯಮಗಳನ್ನು ಭಾಗಶಃ ಸಡಿಲಿಸಿ ಅವರನ್ನು ಜೊತೆಗಾರನಾಗಿ ಆಯ್ಕೆ ಮಾಡಿತು. ಪ್ರೊಫೆಸರ್ ಜೂಲಿಯನ್ ಹಕ್ಸ್ಲಿಯವರು, ನಾನು ತಿಳಿದಿರುವಂತೆ ಎಲ್ಲೋ ಒಂದೆಡೆ ರಾಮಾನುಜರನ್ನು ಈ ಶತಮಾನದ ಶ್ರೇಷ್ಠತಮ ಗಣಿತಜ್ಞ" ಎಂದಿದ್ದಾರೆ.