ಹರಿದಾಸ
From Wikipedia, the free encyclopedia
ಹರಿದಾಸ ಭಕ್ತಿ ಚಳುವಳಿಯು ಭಾರತದ ಸಾಂಸ್ಕೃತಿಕ ಇತಿಹಾಸಕ್ಕೆ ಒಂದು ಮಹತ್ವದ ತಿರುವು ನೀಡಿತ್ತು. ಆರು ಶತಮಾನಗಳ ಅವಧಿಯಲ್ಲಿ ಹಲವು ಸಂತರು ಹಾಗು ಯೊಗಿಗಳು ದಕ್ಷಿಣ ಭಾರತ ಅದರಲ್ಲೂ ವಿಶೇಷವಾಗಿ ಕರ್ನಾಟಕದ ಸಂಸ್ಕಾರ, ತತ್ವ ಹಾಗು ಕಲೆಯನ್ನು ರೂಪಗೊಳಿಸುವಲ್ಲಿ ಸಹಾಯ ಮಾಡಿದ್ದಾರೆ, ಅವರು ಸಾಕಷ್ಟು ಧಾರ್ಮಿಕ ಪ್ರಭಾವವನ್ನು ಜನ ಸಮೂಹ ಹಾಗು ದಕ್ಷಿಣ ಭಾರತವನ್ನು ಆಳಿದ ರಾಜ್ಯಗಳ ಮೇಲೆ ಬೀರಿದರು.[1]
ಈ ಚಳುವಳಿಯನ್ನು ಪ್ರಾರಂಭಿಸಿದ್ದು ಹರಿದಾಸರು (ಕನ್ನಡ:ಹರಿದಾಸರು,ಇದರ ಅಕ್ಷರಶಃ ಅರ್ಥವೆಂದರೆ 'ಹರಿಯ ಸೇವಕರು') ಹಾಗು ಆಕಾರ ಪಡೆದದ್ದು ೧೩ನೆಯ- ೧೪ನೆಯ ಶತಮಾನದ, ಕಾಲಮಾನದಲ್ಲಿ, ವಿಜಯನಗರ ಸಾಮ್ರಾಜ್ಯ ಆಳ್ವಿಕೆಯಾ ಕಾಲದಲ್ಲಿ ಹಾಗು ಅದರ ಮುನ್ನ. ಈ ಚಳುವಳಿಯ ಮುಕ್ಯ ಗುರಿ ಮಧ್ವಾಚಾರ್ಯರ ದ್ವೈತ ತತ್ತ್ವಶಾಸ್ತ್ರ (ಮಧ್ವ ಸಿದ್ಧಾಂತ )ವನ್ನು ಜನಸಾಮಾನ್ಯರಲ್ಲಿ ದಾಸ ಸಾಹಿತ್ಯ (ಭಗವಂತನ ಸೇವಕರ ಸಾಹಿತ್ಯ)ದ ಮಾಧ್ಯಮದಲ್ಲಿ ಪ್ರಸಾರಿಸುವುದು.[2]
ಶ್ರೀಪಾದರಾಯ, ವ್ಯಾಸತೀರ್ಥ, ವಾದಿರಾಜತೀರ್ಥ, ಪುರಂದರ ದಾಸ ಹಾಗು ಕನಕ ದಾಸರಂತಹ ಪ್ರಖ್ಯಾತ ಹಿಂದೂ ತತ್ವಜ್ಞಾನಿಗಳು, ಕವಿಗಳು ಹಾಗು ವಿದ್ವಾಂಸರು ಈ ಸಮಯದಲ್ಲಿ ಮುಖ್ಯ ಪಾತ್ರ ವಹಿಸಿದರು.[2] ಈ ಚಳುವಳಿ ಕನ್ನಡನಾಡಿನಲ್ಲಿ ಆರಂಭವಾಗಿ ನಂತರ ದಕ್ಷಿಣ ಭಾರತದ ಬೇರೆಡೆ ಹಬ್ಬಿದರೂ, ಇದು ಮುಂಚಿನ ಭಕ್ತಿ ಚಳುವಳಿಗಳಾದ ಬಸವಣ್ಣನವರು ೧೨ನೆಯ ಶತಮಾನದಲ್ಲಿ ಉತ್ತರ ಕರ್ನಾಟಕದಲ್ಲಿ ನಡೆಸಿದ್ದ ವೀರಶೈವ ಚಳುವಳಿ (ಕನ್ನಡದ ವಚನ ಸಾಹಿತ್ಯ ) ಹಾಗು ತಮಿಳು ನಾಡಿನ ಆಳ್ವಾರ್ ಸಂತರ ೧೦ ನೆಯ ಶತಮಾನದ ಚಳುವಳಿಗಳ ಫಲ.[3][4] ಮುಂದೆ, ವಲ್ಲಭಾಚಾರ್ಯ ಗುಜರಾತ್ನಲ್ಲಿ ಹಾಗು ಗುರು ಚೈತನ್ಯ ಮಹಾಪ್ರಭು ಮಧ್ವಾಚಾರ್ಯರ ಬೋಧನೆಗಳಿಂದ ಪ್ರಭಾವಿತರಾದರು. ಅವರ ಭಕ್ತರು ವಿಶ್ವಾದ್ಯಂತ ಇಸ್ಕಾನ್(ISKCON) ಚಳುವಳಿ ಶುರುಮಾಡಿದರು.[5]
ಹರಿದಾಸರು ಸಂತರು, ಕೆಲವರು ಅಲೆದಾಡುವ ಹಾಡುಗರು, ಹಾಗು ತಮ್ಮನು ತಾವು - ಹರಿಯ ಸೇವಕರೆಂದು ಭಾವಿಸುತಿದ್ದರು. ಈ ಚಳುವಳಿ ಮುಖ್ಯವಾಗಿ ಬ್ರಾಹ್ಮಣರು ನಡೆಸಿದರೂ, ಸಮಾಜದ ಎಲ್ಲ ವರ್ಗದವರು ಇದಕ್ಕೆ ಕೊಡುಗೆಯನ್ನು ನೀಡಿದ್ದಾರೆ.[6] ಹರಿದಾಸ ಚಳುವಳಿ ಕನ್ನಡ ಭಕ್ತಿ ಸಾಹಿತ್ಯಕ್ಕೆ ಬಹಳ ದೊಡ್ಡ ಕೊಡುಗೆ ನೀಡಿದೆ.[7]