From Wikipedia, the free encyclopedia
ಕುದರಿ ಸಾಲವಾಡಗಿ ಗ್ರಾಮವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನಲ್ಲಿದೆ.
ಕುದರಿ ಸಾಲವಾಡಗಿ
ಕುದರಿ ಸಾಲವಾಡಗಿ | |
---|---|
village | |
Population (೨೦೧೨) | |
• Total | ೧೫೦೦ |
ಗ್ರಾಮವು ಭೌಗೋಳಿಕವಾಗಿ ೧೬* ೩೨' ೧೦"x ಉತ್ತರ ಅಕ್ಷಾಂಶ ಮತ್ತು ೭೫* ೩೧' ೧೯" ಪೂರ್ವ ರೇಖಾಂಶದಲ್ಲಿ ಬರುತ್ತದೆ.
ಗ್ರಾಮದಲ್ಲಿ ಜನಸಂಖ್ಯೆ(2011) ಸುಮಾರು 8,128 ಇದೆ. ಅದರಲ್ಲಿ 4,203 ಪುರುಷರು ಮತ್ತು 3,925 ಮಹಿಳೆಯರು ಇದ್ದಾರೆ.
ಮುಖ್ಯ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಉರ್ದು, ಮರಾಠಿ ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ,ಮೆಕ್ಕೆ ಜೋಳ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ಜೋಳದ ರೊಟ್ಟಿ, ಸೇಂಗಾ ಚಟ್ನಿ, ಎಣ್ಣಿ ಬದನೆಯಕಾಯಿ ಪಲ್ಯ, ಕೆನೆಮೊಸರು ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ.
ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ.ಮಹಿಳೆಯರು ಇಲಕಲ್ಲ ಸೀರೆ ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ.
ಗ್ರಾಮದ ಪ್ರಮುಖ ಭಾಷೆ ಕನ್ನಡ. ಇದರೊಂದಿಗೆ ಹಿಂದಿ, ಮರಾಠಿ ಹಾಗೂ ಇಂಗ್ಲೀಷ್ ಭಾಷೆಗಳನ್ನು ಮಾತನಾಡುತ್ತಾರೆ.
ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.
ಗ್ರಾಮದ ಪ್ರತಿಶತ 50 ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.
ಗ್ರಾಮದ ಪ್ರಮುಖ ಉದ್ಯೋಗವೇ ಕೃಷಿ ಮತ್ತು ತೋಟಗಾರಿಕೆಯಾಗಿದೆ. ಈ ಕ್ಷೇತ್ರದಲ್ಲಿ ಸುಮಾರು ೭೫% ಜನರು ಕೆಲಸ ಮಾಡುತ್ತಾರೆ. ಗ್ರಾಮದಲ್ಲಿ ಕೇವಲ ೧೫% ಭೂಮಿ ಮಾತ್ರ ನೀರಾವರಿ ಹೊಂದಿದೆ. ಉಳಿದ ೮೫% ಭೂಮಿ ಮಳೆಯನ್ನೇ ಅವಲಂಭಿಸಿದೆ.
ಗ್ರಾಮದಲ್ಲಿ ಆರ್ಥಿಕ ವ್ಯವಸ್ಥೆ ಮಧ್ಯಮ ತರಗತಿಯಲ್ಲಿದೆ.
ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ ೭೦% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ.
ಆಹಾರ ಬೆಳೆಗಳು
ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ
ವಾಣಿಜ್ಯ ಬೆಳೆಗಳು
ದ್ರಾಕ್ಷಿ, ಕಬ್ಬು, ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ.
ತರಕಾರಿ ಬೆಳೆಗಳು
ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರೆಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ.
ಆಲದ ಮರ, ಬೇವಿನ ಮರ, ಜಾಲಿ ಮರ, ಹೈಬ್ರೀಡ್ ಜಾಲಿ ಮರ, ಮಾವಿನ ಮರ ಮತ್ತು ಅರಳಿ ಮರ ಇತ್ಯಾದಿ.
ತೋಳ, ನರಿ, ಹಾವು, ಮೊಲ, ನವಿಲು, ಬೆಳ್ಳಕ್ಕಿ, ಗುಬ್ಬಿ, ಕಾಗೆ, ಕೋಗಿಲೆ ಇತ್ಯಾದಿ.
ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.
ಗ್ರಾಮದ ಸಾಕ್ಷರತೆಯ ಪ್ರಮಾಣ ಸುಮಾರು ೬೭%. ಅದರಲ್ಲಿ ೭೫% ಪುರುಷರು ಹಾಗೂ ೫೫% ಮಹಿಳೆಯರು ಸಾಕ್ಷರತೆ ಹೊಂದಿದೆ.
ಗ್ರಾಮವು ವಿಜಯಪುರ ಲೋಕಸಭಾ ಕ್ಷೇತ್ರ ಮತ್ತು ದೇವರ ಹಿಪ್ಪರಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ.
ಗ್ರಾಮದ ಮುಖಂಡರಾದ ದಿ.ಕುಮಾರಗೌಡ ಪಾಟೀಲರು ಮಾಜಿ ಶಾಸಕರು. ಅದರಂತೆ ರಾಜುಗೌಡ(ಭೀಮನಗೌಡ) ಬಸನಗೌಡ ಪಾಟೀಲ ರಾಜಕೀಯ ಧುರೀಣರಾಗಿದ್ದಾರೆ.
ದೇವರ ಹಿಪ್ಪರಗಿ ವಿಧಾನಸಭಾ ಕ್ಷೇತ್ರವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ 8 ವಿಧಾನ ಸಭಾ ಕ್ಷೆತ್ರಗಳಲ್ಲಿ ಒಂದಾಗಿದೆ. ದೇವರ ಹಿಪ್ಪರಗಿ ಮತಕ್ಷೇತ್ರ(2018)ದಲ್ಲಿ 1,07,407 ಪುರುಷರು, 99,773 ಮಹಿಳೆಯರು ಸೇರಿ ಒಟ್ಟು 2,07,180 ಮತದಾರರಿದ್ದಾರೆ.
ಕ್ಷೇತ್ರದ ಇತಿಹಾಸ
ಪುಣ್ಯಕ್ಷೇತ್ರವಾಗಿ ಪ್ರಸಿದ್ಧಿ ಪಡೆದ ದೇವರ ಹಿಪ್ಪರಗಿ ಗ್ರಾಮ ವಿಜಯಪುರ - ಗುಲ್ಬರ್ಗಾ ಹೆದ್ದಾರಿಯಲ್ಲಿದೆ. ಮೂರು ತಾಲೂಕುಗಳನ್ನೊಳಗೊಂಡಿರೋ ಈ ವಿಧಾನಸಭಾ ಕ್ಷೇತ್ರವಾಗಿದೆ. 2008ರಲ್ಲಿ ಈ ಕ್ಷೇತ್ರದ ಹೆಸರು ದೇವರ ಹಿಪ್ಪರಗಿ ಎಂದು ಬದಲಾಯಿತು. ಮುಂಚೆ ಹೂವಿನಹಿಪ್ಪರಗಿ ಕ್ಷೇತ್ರವಾಗಿತ್ತು. ಬಸವನ ಬಾಗೇವಾಡಿ ತಾಲ್ಲೂಕಿನ ನಿಡಗುಂದಿ ಹೋಬಳಿ ಕೈಬಿಟ್ಟು, ಸಿಂದಗಿ ತಾಲ್ಲೂಕಿನ ದೇವರ ಹಿಪ್ಪರಗಿ ಹೋಬಳಿಯನ್ನು ಈ ಕ್ಷೇತ್ರದಲ್ಲಿ ಸೇರಿಸಲಾಯಿತು.
ತಾಳಿಕೋಟೆ ಕ್ಷೇತ್ರದ ಭಾಗವಾಗಿದ್ದ ಹಳ್ಳಿಗಳೆಲ್ಲ ಸೇರಿ 1967ರಲ್ಲಿ ರಚನೆಗೊಂಡ ಹೂವಿನಹಿಪ್ಪರಗಿ ಕ್ಷೇತ್ರ, 2008ರ ಕ್ಷೇತ್ರ ಮರುವಿಂಗಡಣೆ ಹಂತದಲ್ಲಿ ದೇವರಹಿಪ್ಪರಗಿ ಕ್ಷೇತ್ರವಾಗಿ ರೂಪುಗೊಂಡಿದೆ. 11 ಚುನಾವಣೆ ಕಂಡಿರುವ ಈ ಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿ, ಸಚಿವರಾಗಿ ಅಧಿಕಾರ ನಡೆಸಿದ ಬಿ.ಎಸ್. ಪಾಟೀಲ ಸಾಸನೂರ ಅವರು ಕ್ಷೇತ್ರದ ಅರ್ಧ ಸಮಯವನ್ನು ತಾವೇ ವಿಧಾನಸಭೆಯಲ್ಲಿ ಕಳೆದಿದ್ದಾರೆ. ಜನತಾಪಕ್ಷ ಶಾಸಕರಾಗಿ ರಾಜಕೀಯ ಆರಂಭಿಸಿದ್ದ ಬಿ.ಎಸ್. ಪಾಟೀಲ ಸಾಸನೂರು ನಂತರ ನಾಲ್ಕು ಬಾರಿ ಕಾಂಗ್ರೆಸ್ ಪಕ್ಷ ಶಾಸಕರಾಗಿ ಒಟ್ಟು ಐದು ಬಾರಿ ವಿಧಾನಸಭೆಯಲ್ಲಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಎ.ಎಸ್.ಪಾಟೀಲ(ನಡಹಳ್ಳಿ) ಸತತ 2013 ಮತ್ತು 2008ರಲ್ಲಿ ಎರಡು ಬಾರಿ ಗೆದ್ದಿದ್ದಾರೆ. ಬಿ.ಎಸ್.ಪಾಟೀಲ(ಸಾಸನೂರ)ರು ಒಟ್ಟು 6 ಸಲ ಸ್ಪರ್ಧಿಸಿ 4 ಬಾರಿ ಆಯ್ಕೆಯಾಗಿ ವೀರಪ್ಪ ಮೊಯಿಲಿ ಅವರ ಸಂಪುಟದಲ್ಲಿ ಆರೋಗ್ಯ ಖಾತೆ ಹಾಗೂ ಎಸ್.ಎಂ. ಕೃಷ್ಣ ಸಂಪುಟದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವರಾಗಿದ್ದರು. ಶಿವಪುತ್ರಪ್ಪ ದೇಸಾಯಿ ಅವರು ಜೆ.ಎಚ್. ಪಟೇಲ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಭೂಸೇನಾ ಮತ್ತು ಉಗ್ರಾಣ ನಿಗಮದ ಅಧ್ಯಕ್ಷರಾಗಿದ್ದರು. ಶಿವಪುತ್ರಪ್ಪ ದೇಸಾಯಿ 5 ಬಾರಿ ಸ್ಪರ್ಧಿಸಿ 3 ಬಿ.ಎಸ್.ಪಾಟೀಲ(ಸಾಸನೂರ)ನ್ನು ಸೋಲಿಸಿ ಆಯ್ಕೆಯಾಗಿದ್ದು ಹಾಗೂ ಇಬ್ಬರು ಸಂಬಂಧಿಕರಾಗಿದ್ದು ವಿಶೇಷವಾಗಿದೆ. ಶಿವಪುತ್ರಪ್ಪ ದೇಸಾಯಿಯವರು ಉಗ್ರಾಣ ನಿಗಮದ ಮಾಜಿ ಅಧ್ಯಕ್ಷರು. 1978ರಿಂದ 2004ವರೆಗೆ ಶಿವಪುತ್ರಪ್ಪ ದೇಸಾಯಿ ಹಾಗೂ ಬಿ.ಎಸ್.ಪಾಟೀಲ(ಸಾಸನೂರ) ನಡುವೆ ಸ್ಪರ್ಧೆ ಏರ್ಪಟ್ಟಿತ್ತು.
ಬಿ.ಎಸ್.ಪಾಟೀಲ(ಸಾಸನೂರ) 1978ರಲ್ಲಿ ಜನತಾ ಪಕ್ಷದಿಂದ ಹಾಗೂ 1983ರಲ್ಲಿ ಕಾಂಗ್ರೆಸ್ನಿಂದ ಆಯ್ಕೆಯಾಗಿದ್ದರು. ನಂತರ 1986ರಲ್ಲಿ ಚುನಾವಣೆ ಎದುರಾಯಿತು. ಇದು ಮಾವ-ಅಳಿಯನ ಆಖಾಡಕ್ಕೆ ಸಾಕ್ಷಿಯಾಗಿತ್ತು. ಜನತಾ ಪಕ್ಷದಿಂದ ಸ್ಪರ್ಧಿಸಿದ ಅಳಿಯ ಶಿವಪುತ್ರಪ್ಪ ದೇಸಾಯಿ, ಮಾವ ಸಾಸನೂರ ಅವರ ಹ್ಯಾಟ್ರಿಕ್ ಸಾಧನೆಗೆ ಬ್ರೇಕ್ ನೀಡಿದ್ದರು. ಮತ್ತೆ 1989ರಲ್ಲಿ ಮಾವ ಬಿ.ಎಸ್.ಪಾಟೀಲ(ಸಾಸನೂರ) ಅಳಿಯ ಶಿವಪುತ್ರಪ್ಪ ದೇಸಾಯಿ ಅವರನ್ನು 15395 ಮತಗಳಿಂದ ಪರಾಭವಗೊಳಿಸಿದ್ದರು. ನಂತರ 1994ರಲ್ಲಿ ಅದೇ ಪಕ್ಷದಿಂದ ಶಿವಪುತ್ರಪ್ಪ ದೇಸಾಯಿ ತಮ್ಮ ಮಾವನನ್ನು 12427 ಮತಗಳಿಂದ ಸೋಲಿಸಿದರು. 1999ರಲ್ಲಿ ಎದುರಾದ ಚುನಾವಣೆಯಲ್ಲಿ ಪುನಃ ಬಿ.ಎಸ್.ಪಾಟೀಲ(ಸಾಸನೂರ) ಅಳಿಯನನ್ನು ಪರಾಭಗೊಳಿಸಿದರೆ, 2004ರಲ್ಲಿ ನಡೆದ ಚುನಾವಣೆಯಲ್ಲಿ ಮುಯ್ಯಿಗೆ ಮುಯ್ಯಿ ಎಂಬಂತೆ ಶಿವಪುತ್ರಪ್ಪ ದೇಸಾಯಿ ಅವರು ಮತ್ತೆ ಮಾವನನ್ನು ಸೋಲಿಸಿದ್ದರು.
ಕ್ಷೇತ್ರದ ವಿಶೇಷತೆ
ಜನಪ್ರತಿನಿಧಿಗಳ ವಿವರ
ವರ್ಷ | ವಿಧಾನ ಸಭಾ ಕ್ಷೆತ್ರ | ವಿಜೇತ | ಪಕ್ಷ | ಮತಗಳು | ಉಪಾಂತ ವಿಜೇತ | ಪಕ್ಷ | ಮತಗಳು |
ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರ | ಕರ್ನಾಟಕ ರಾಜ್ಯ | ||||||
2018 | ದೇವರ ಹಿಪ್ಪರಗಿ ವಿಧಾನಸಭಾ ಕ್ಷೇತ್ರ | ಸೋಮನಗೌಡ ಪಾಟೀಲ | ಬಿ.ಜೆ.ಪಿ | 48245 | ರಾಜುಗೌಡ ಪಾಟೀಲ | ಜೆ.ಡಿ.ಎಸ್. | 44892 |
2013 | ದೇವರ ಹಿಪ್ಪರಗಿ ವಿಧಾನಸಭಾ ಕ್ಷೇತ್ರ | ಎ.ಎಸ್.ಪಾಟೀಲ(ನಡಹಳ್ಳಿ) | ಕಾಂಗ್ರೇಸ್ | 36231 | ಸೋಮನಗೌಡ ಪಾಟೀಲ | ಬಿ.ಜೆ.ಪಿ | 28135 |
2008 | ದೇವರ ಹಿಪ್ಪರಗಿ ವಿಧಾನಸಭಾ ಕ್ಷೇತ್ರ | ಎ.ಎಸ್.ಪಾಟೀಲ(ನಡಹಳ್ಳಿ) | ಕಾಂಗ್ರೇಸ್ | 54879 | ಬಸನಗೌಡ ಪಾಟೀಲ(ಯತ್ನಾಳ) | ಬಿ.ಜೆ.ಪಿ | 23986 |
2004 | ಹೂವಿನ ಹಿಪ್ಪರಗಿ ವಿಧಾನಸಭಾ ಕ್ಷೇತ್ರ | ಶಿವಪುತ್ರಪ್ಪ ದೇಸಾಯಿ | ಬಿ.ಜೆ.ಪಿ | 39224 | ಬಿ.ಎಸ್.ಪಾಟೀಲ(ಸಾಸನೂರ) | ಕಾಂಗ್ರೇಸ್ | 32927 |
1999 | ಹೂವಿನ ಹಿಪ್ಪರಗಿ ವಿಧಾನಸಭಾ ಕ್ಷೇತ್ರ | ಬಿ.ಎಸ್.ಪಾಟೀಲ(ಸಾಸನೂರ) | ಕಾಂಗ್ರೇಸ್ | 46088 | ಶಿವಪುತ್ರಪ್ಪ ದೇಸಾಯಿ | ಜೆ.ಡಿ.ಯು | 28492 |
1994 | ಹೂವಿನ ಹಿಪ್ಪರಗಿ ವಿಧಾನಸಭಾ ಕ್ಷೇತ್ರ | ಶಿವಪುತ್ರಪ್ಪ ದೇಸಾಯಿ | ಜೆ.ಡಿ. | 35849 | ಬಿ.ಎಸ್.ಪಾಟೀಲ(ಸಾಸನೂರ) | ಕಾಂಗ್ರೇಸ್ | 23422 |
1989 | ಹೂವಿನ ಹಿಪ್ಪರಗಿ ವಿಧಾನಸಭಾ ಕ್ಷೇತ್ರ | ಬಿ.ಎಸ್.ಪಾಟೀಲ(ಸಾಸನೂರ) | ಕಾಂಗ್ರೇಸ್ | 36588 | ಶಿವಪುತ್ರಪ್ಪ ದೇಸಾಯಿ | ಜೆ.ಡಿ. | 21193 |
1985 | ಹೂವಿನ ಹಿಪ್ಪರಗಿ ವಿಧಾನಸಭಾ ಕ್ಷೇತ್ರ | ಶಿವಪುತ್ರಪ್ಪ ದೇಸಾಯಿ | ಜೆ.ಎನ್.ಪಿ | 31748 | ಬಿ.ಎಸ್.ಪಾಟೀಲ(ಸಾಸನೂರ) | ಕಾಂಗ್ರೇಸ್ | 27949 |
1983 | ಹೂವಿನ ಹಿಪ್ಪರಗಿ ವಿಧಾನಸಭಾ ಕ್ಷೇತ್ರ | ಬಿ.ಎಸ್.ಪಾಟೀಲ(ಸಾಸನೂರ) | ಕಾಂಗ್ರೇಸ್ | 30320 | ಬಸನಗೌಡ ಲಿಂಗನಗೌಡ ಪಾಟೀಲ | ಜೆ.ಎನ್.ಪಿ | 17872 |
1978 | ಹೂವಿನ ಹಿಪ್ಪರಗಿ ವಿಧಾನಸಭಾ ಕ್ಷೇತ್ರ | ಬಿ.ಎಸ್.ಪಾಟೀಲ(ಸಾಸನೂರ) | ಜೆ.ಎನ್.ಪಿ | 26814 | ಕುಮಾರಗೌಡ ಪಾಟೀಲ | ಕಾಂಗ್ರೇಸ್(ಐ) | 22531 |
ಹೂವಿನ ಹಿಪ್ಪರಗಿ ವಿಧಾನಸಭಾ ಕ್ಷೇತ್ರ | ಮೈಸೂರು ರಾಜ್ಯ | ||||||
1972 | ಹೂವಿನ ಹಿಪ್ಪರಗಿ ವಿಧಾನಸಭಾ ಕ್ಷೇತ್ರ | ಕೆ.ಡಿ.ಪಾಟೀಲ(ಉಕ್ಕಲಿ) | ಎನ್.ಸಿ.ಓ. | 18331 | ಎಲ್.ಆರ್.ನಾಯಕ | ಕಾಂಗ್ರೇಸ್ | 12855 |
1967 | ಹೂವಿನ ಹಿಪ್ಪರಗಿ ವಿಧಾನಸಭಾ ಕ್ಷೇತ್ರ | ಗದಿಗೆಪ್ಪಗೌಡ ಪಾಟೀಲ | ಕಾಂಗ್ರೇಸ್ | 15189 | ಹೆಚ್.ಕೆ.ಮಾರ್ತಂಡಪ್ಪ | ಎಸ್.ಡಬ್ಲೂ.ಎ | 7050 |
1962 | ತಾಳಿಕೋಟ ವಿಧಾನಸಭಾ ಕ್ಷೇತ್ರ | ಜಿ.ಎನ್.ಪಾಟೀಲ | ಕಾಂಗ್ರೇಸ್ | ಅವಿರೋದ ಆಯ್ಕೆ | |||
1957 | ತಾಳಿಕೋಟ ವಿಧಾನಸಭಾ ಕ್ಷೇತ್ರ | ಕುಮಾರಗೌಡ ಪಾಟೀಲ | ಪಕ್ಷೇತರ | 15200 | ಶರಣಯ್ಯ ವಸ್ತದ | ಕಾಂಗ್ರೇಸ್ | 12804 |
ಬಾಗೇವಾಡಿ-ಹಿಪ್ಪರಗಿ ವಿಧಾನಸಭಾ ಕ್ಷೇತ್ರ | ಬಾಂಬೆ ರಾಜ್ಯ | ||||||
1951 | ಬಾಗೇವಾಡಿ-ಹಿಪ್ಪರಗಿ ವಿಧಾನಸಭಾ ಕ್ಷೇತ್ರ | ಶಂಕರಗೌಡ ಪಾಟೀಲ | ಕಾಂಗ್ರೇಸ್ | 17752 | ಸಾವಳಗೆಪ್ಪ ನಂದಿ | ಕೆ.ಎಂ.ಪಿ.ಪಿ | 5507 |
Seamless Wikipedia browsing. On steroids.
Every time you click a link to Wikipedia, Wiktionary or Wikiquote in your browser's search results, it will show the modern Wikiwand interface.
Wikiwand extension is a five stars, simple, with minimum permission required to keep your browsing private, safe and transparent.