ಅಕ್ಷಯ ತೃತೀಯಾ
From Wikipedia, the free encyclopedia
ಅಕ್ಷಯ ತೃತೀಯಾ (ಕನ್ನಡದಲ್ಲಿ: ಅಕ್ಷಯ ತದಿಗೆ) ಹಿಂದೂ ಮತ್ತು ಜೈನ ಧರ್ಮೀಯರಿಗೆ ಮಂಗಳಕರವಾದ ದಿನವಾಗಿದ್ದು, ವೈಶಾಖ ಮಾಸದ ಶುಕ್ಲ ಪಕ್ಷ ಮೂರನೆಯ ದಿನ(ತದಿಗೆ)ದಂದು ಅಕ್ಷಯ ತೃತೀಯಾವನ್ನು ಆಚರಿಸಲಾಗುತ್ತದೆ. ಈ ದಿನ ಖರೀದಿಸಿದ ಬಂಗಾರವು ಎಂದಿಗೂ ಅಕ್ಷಯವಾಗಿ ಉಳಿಯುತ್ತದೆ ಎಂಬ ನಂಬಿಕೆ ಹಿಂದೂ ಧರ್ಮದಲ್ಲಿ ಶಾಶ್ವತ ಇದೆ. ಶ್ರೇಷ್ಠವಾದ ಕೆಲಸಗಳನ್ನು ಈ ದಿನ ಕೈಗೊಂಡರೆ ಎಂದಿಗೂ ಮುಗಿಯದಂತಹ (ಅ-ಕ್ಷಯ) ಮಂಗಳಕರವಾದ ಸಿದ್ಧಿಗಳು ಉಂಟಾಗುವವು ಎಂಬ ನಂಬಿಕೆಯಿದೆ.[1]