![cover image](https://wikiwandv2-19431.kxcdn.com/_next/image?url=https://upload.wikimedia.org/wikipedia/commons/thumb/7/7e/AANE_GUDDE.jpg/640px-AANE_GUDDE.jpg&w=640&q=50)
ಆನೆಗುಡ್ಡೆ ವಿನಾಯಕ ದೇವಸ್ಥಾನ
From Wikipedia, the free encyclopedia
[1] [2] ಉಡುಪಿ ಜಿಲ್ಲೆ, ಕುಂದಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ೧೭ ರಲ್ಲಿ ಹೆದ್ದಾರಿಯಿಂದ ೧ ಕಿಲೋಮೀಟರ್ ದೂರದಲ್ಲಿರುವುದೇ ಆನೆಗುಡ್ಡೆ. ಆನೆಗುಡ್ಡೆ ವಿನಾಯಕ ದೇವಸ್ಥಾನವು ಬಹು ಪ್ರಸಿದ್ದ ಹಿಂದೂ ಧಾರ್ಮಿಕ ಕೇಂದ್ರ. ಇಲ್ಲಿ ಪ್ರತಿದಿನ ಸಾವಿರಾರು ಭಕ್ತಾದಿಗಳು ವಿನಾಯಕನ ದರ್ಶನವನ್ನು ಪಡೆಯುತ್ತಾರೆ. ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಪ್ರಸಿದ್ದವಾದ ದೇವಸ್ಥಾನಗಳಲ್ಲಿ ಇದೂ ಕೂಡ ಒಂದು. ಈ ಕ್ಷೇತ್ರವು ಪರಶುರಾಮ ಮಹರ್ಷಿಯ ಸೃಷ್ಟಿಯೆಂದು ಹೇಳಲಾಗಿದೆ. ಕಾಲಕ್ರಮೇಣ, ಈ ದೇವಸ್ಥಾನವಿರುವ ಸ್ಥಳವು ಬೇರೆ ಬೇರೆ ಹೆಸರುಗಳನ್ನು ಪಡೆದುಕೊಂಡಿತು. ಈ ದೇವಾಲಯದ ಪರಿಸರದಲ್ಲಿನ ಪ್ರಶಾಂತತೆ ನಿಜವಾಗಿಯೂ ಒಂದು ಅದ್ಭುತ ಅನುಭವ. ಅಲ್ಲಿಯೇ ಹತ್ತಿರದಲ್ಲಿ ನಾಗಾಚಲ ಅಯ್ಯಪ್ಪ ಸ್ವಾಮಿ ದೇವಾಲಯ ಹಾಗೂ ಇತರ ದೇವಾಲಯಗಳಿವೆ. ವಿನಾಯಕನ ಸನ್ನಿದಾನದಲ್ಲಿ ಪ್ರತಿನಿತ್ಯ ಅನ್ನದಾನ ಸೇವೆ ನಡೆಯುತ್ತದೆ.
![]() | This article needs more links to other articles to help integrate it into the encyclopedia. (ಡಿಸೆಂಬರ್ ೨೦೧೫) |
![](http://upload.wikimedia.org/wikipedia/commons/thumb/7/7e/AANE_GUDDE.jpg/640px-AANE_GUDDE.jpg)