ಕಿತ್ತೂರು ಸಂಸ್ಥಾನದ ಮಹಾರಾಣಿ, ಹೋರಾಟಗಾರ್ತಿ (೧೭೭೮-೧೮೨೯) From Wikipedia, the free encyclopedia
ಕಿತ್ತೂರು ರಾಣಿ ಚೆನ್ನಮ್ಮ [೧] (೧೭೭೮-೧೮೨೯) ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಹೋರಾಡಿದ್ದಳು[೨] . ಚೆನ್ನಮ್ಮ[೩] ನಿಂದ ಕಿತ್ತೂರು ಪ್ರಸಿದ್ಧವಾಗಿದೆ.
ಕಿತ್ತೂರು ಚೆನ್ನಮ್ಮ ಹುಟ್ಟಿದ್ದು ೨೩ ಅಕ್ಟೋಬರ್ ೧೭೭೮ರಲ್ಲಿ. ಬೆಳಗಾವಿಯಿಂದ ಉತ್ತರಕ್ಕೆ ಸುಮಾರು ೬ ಕಿ.ಮಿ. ದೂರದಲ್ಲಿರುವ ಕಾಕತಿ ಅವಳ ಹುಟ್ಟೂರು. ತಂದೆ ಕಾಕತಿಯ ದೇಸಾಯಿ ಧೂಳಪ್ಪಗೌಡರು. ಚೆನ್ನಮ್ಮ ಎಳೆ ವಯಸ್ಸಿನಲ್ಲಿಯೆ ಕುದುರೆ ಸವಾರಿ ಹಾಗು ಬಿಲ್ಲುವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದಳು. ಸ್ವಂತ ಮಕ್ಕಳಿಲ್ಲದ ರಾಣಿ ಚೆನ್ನಮ್ಮ ರಾಜನಿಷ್ಠರಾದ ಗುರುಸಿದ್ದಪ್ಪ, ಹಿಮ್ಮತಸಿಂಗ,ಸಂಗೊಳ್ಳಿ ರಾಯಣ್ಣ ನರಸಿಂಗರಾವ, ಗುರುಪುತ್ರ ಮತ್ತು ಇತರ ಬೆಂಬಲಿಗರ ನೆರವಿನಿಂದ ತನ್ನ ದತ್ತಕ ಮೊಮ್ಮಗನಿಗೆ ಪಟ್ಟ ಕಟ್ಟಿದಳು.
ಕಿತ್ತೂರು ಚೆನ್ನಮ್ಮ ಅವರು 1778 ರ ಅಕ್ಟೋಬರ್ 23 ರಂದು ಭಾರತದ ಕರ್ನಾಟಕದ ಪ್ರಸ್ತುತ ಬೆಳಗಾವಿ ಜಿಲ್ಲೆಯ ಕಾಕತಿ ಎಂಬ ಸಣ್ಣ ಹಳ್ಳಿಯಲ್ಲಿ ಜನಿಸಿದರು. ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಸೇರಿದ ಆಕೆ ಚಿಕ್ಕಂದಿನಿಂದಲೇ ಕುದುರೆ ಸವಾರಿ, ಕತ್ತಿವರಸೆ ಮತ್ತು ಬಿಲ್ಲುಗಾರಿಕೆಯಲ್ಲಿ ತರಬೇತಿ ಪಡೆದಿದ್ದಳು. ಅವರು ದೇಸಾಯಿ ಮನೆತನದ ರಾಜಾ ಮಲ್ಲಸರ್ಜ ಅವರನ್ನು 15 ನೇ ವಯಸ್ಸಿನಲ್ಲಿ ವಿವಾಹವಾದರು.[೪] [೫]
Seamless Wikipedia browsing. On steroids.