ಚಿಕ್ಕಬಳ್ಳಾಪುರ
From Wikipedia, the free encyclopedia
ಟೆಂಪ್ಲೇಟು:Infobox ಜಿಲ್ಲೆಚಿಕ್ಕಬಳ್ಳಾಪುರ ಕರ್ನಾಟಕದ ಜಿಲ್ಲೆಗಳಲ್ಲಿ ಒಂದು. ಮುಂಚೆ ಕೋಲಾರ ಜಿಲ್ಲೆಯಲ್ಲಿನ ಒಂದು ತಾಲೂಕು ಆಗಿದ್ದ ಇದು 23 ಆಗಸ್ಟ್ 2007 ರಂದು, ಗೌರಿಬಿದನೂರು, ಗುಡಿಬಂಡಾ, ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಶಿಡ್ಲಘಟ್ಟ ಮತ್ತು ಚಿಂತಾಮಣಿ ತಾಲ್ಲೂಕುಗಳನ್ನು ಹೊಸ ಜಿಲ್ಲೆಗೆ ಸ್ಥಳಾಂತರಿಸುವ ಮೂಲಕ ಕರ್ನಾಟಕದ ನಾಲ್ಕನೇ ದೊಡ್ಡ ಜಿಲ್ಲೆ (ವಿಭಜನೆಯ ಮೊದಲು) ಪೂರ್ವ ಅಸ್ತಿತ್ವದಲ್ಲಿರುವ ಕೋಲಾರ ಜಿಲ್ಲೆಯಿಂದ ಕೆತ್ತಲಾಗಿದೆ. ಅಧಿಕೃತ ಮತ್ತು ಹೆಚ್ಚು ಮಾತನಾಡುವ ಭಾಷೆ ಕನ್ನಡವಾಗಿದೆ. ೨೦೦೮ ರಲ್ಲಿ ಜಿಲ್ಲಾ ಅಡಳಿತ ಕೇಂದ್ರವಾಯಿತು. ಇಲ್ಲಿಗೆ ಹತ್ತಿರ ಇರುವ ನಂದಿ ದೇವಸ್ಥಾನ ಬಹಳ ಪ್ರಾಚೀನ ದೇವಸ್ಥಾನ. ಇಲ್ಲಿ ಶಿವನ ಲಿಂಗಗಳೆರಡು ಇವೆ. ಗಂಗ, ಕದಂಬರಿಗಿಂತ ಹಳೆಯ ಶಿಲಾಶಾಸನಗಳನ್ನು ಇಲ್ಲಿ ನಾವು ಕಾಣಬಹುದು. ಆಂಗ್ಲರಲ್ಲಿನ ಪ್ರಮುಖರಾದ ಲಾರ್ಡ ಕಾರ್ನ್ವಾಲಿಸ್ ಸಹ ಇಲ್ಲಿ ಕೆಲವು ದಿನ ಇದ್ದ ಎನ್ನುವ ಶಾಸನಗಳನ್ನು ಕಾಣಬಹುದು. ಇಲ್ಲಿಗೆ ಸಮೀಪ (೨೫ ಕಿ.ಮಿ.) ಇರುವ ಮಾಕಿರೆಡ್ಡಿಪಲ್ಲಿಯಲ್ಲಿ ಮುತ್ತುರಾಯಸ್ವಾಮಿ ದೇವಸ್ಥಾನವು ಸಹ ಬಹಳ ಪ್ರಾಚೀನವಾದ ದೇವಸ್ಥಾನ. ಇಲ್ಲಿ ಶ್ರೀರಾಮ ನವಮಿಯ ದಿನ ಪೂಜಾ ಕಾರ್ಯಕ್ರಮಗಳು ನಡೆಯುತ್ತವೆ. ನಂದಿ ಬೆಟ್ಟ ಇಲ್ಲಿಯ ಪ್ರಮುಖ ಗಿರಿಧಾಮ.ಆವಲಬೆಟ್ಟ ಪ್ರಸಿದ್ಧ ಸ್ಥಳ. ಚಿಕ್ಕಬಳ್ಳಾಪುರ ಮೆಣಸಿನಕಾಯಿ ತುಂಬ ಪ್ರಸಿದ್ಧಿ. ಇಲ್ಲಿನ ರೈತ ಸಮುದಾಯ ಬಹಳ ಪ್ರಗತಿ ಪರ ರೈತರನ್ನು ಹೊಂದಿದೆ.