ಪೂರ್ಣಚಂದ್ರ ತೇಜಸ್ವಿ
ಭಾರತೀಯ ಲೇಖಕ / From Wikipedia, the free encyclopedia
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು.[1] ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು. ತೇಜಸ್ವಿ ಆರಂಭದಲ್ಲಿ ಬೇರೊಂದು ಹೆಸರಿನಲ್ಲಿ ಕಾವ್ಯ ರಚನೆ ಮಾಡಿದ್ದರೂ, ನಂತರ ಕಥಾ ಸಾಹಿತ್ಯ, ಕಾದಂಬರಿ, ಲೇಖನಗಳ ಕಡೆ ಹೆಚ್ಚಿನ ಗಮನ ಹರಿಸಿದರು.[2]
Quick Facts ಕುಪ್ಪಳ್ಳಿ ಪುಟ್ಟಪ್ಪ ಪೂರ್ಣ ಚಂದ್ರ ತೇಜಸ್ವಿ, ಜನನ ...
ಕುಪ್ಪಳ್ಳಿ ಪುಟ್ಟಪ್ಪ ಪೂರ್ಣ ಚಂದ್ರ ತೇಜಸ್ವಿ | |
---|---|
ಜನನ | ಸೆಪ್ಟೆಂಬರ್ ೮ ೧೯೩೮ ಕುಪ್ಪಳ್ಳಿ, ತೀರ್ಥಹಳ್ಳಿ ತಾಲ್ಲೂಕು, ಶಿವಮೊಗ್ಗ ಜಿಲ್ಲೆ |
ಮರಣ | ಏಪ್ರಿಲ್ ೫ ೨೦೦೭ ಮೂಡಿಗೆರೆ |
ಅಂತ್ಯ ಸಂಸ್ಕಾರ ಸ್ಥಳ | ಕುಪ್ಪಳಿ, ಶಿವಮೊಗ್ಗ ಜಿಲ್ಲೆ |
ಕಾವ್ಯನಾಮ | ಪೂಚಂತೇ |
ವೃತ್ತಿ | ಕೃಷಿಕ, ಲೇಖಕ, ಛಾಯಚಿತ್ರಗಾರ |
ರಾಷ್ಟ್ರೀಯತೆ | ಭಾರತೀಯ |
ಅಭ್ಯಾಸ ಮಾಡಿದ ವಿದ್ಯಾ ಸಂಸ್ಥೆ | ಮೈಸೂರು ವಿಶ್ವವಿದ್ಯಾನಿಲಯ |
ಕಾಲ | 20ನೆಯ ಶತಮಾನ |
ಪ್ರಕಾರ/ಶೈಲಿ | ಸಣ್ಣಕತೆ, ಕವಿತೆ, ಕಾದಂಬರಿ, ನಾಟಕ, ವಿಮರ್ಶೆ, ಆತ್ಮಕಥೆ, ಜನಪ್ರಿಯ ವಿಜ್ಞಾನ |
ವಿಷಯ | ಪರಿಸರ, ವಿಜ್ಞಾನ |
ಸಾಹಿತ್ಯ ಚಳುವಳಿ | ನವ್ಯ ಯುಗ |
ಪ್ರಮುಖ ಪ್ರಶಸ್ತಿ(ಗಳು) | ಪಂಪ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ |
ಬಾಳ ಸಂಗಾತಿ | ರಾಜೇಶ್ವರಿ ತೇಜಸ್ವಿ |
ಮಕ್ಕಳು | ಸುಶ್ಮೀತಾ, ಈಶಾನ್ಯೆ |
ಪ್ರಭಾವಗಳು | |
nammatejaswi |
Close