ಮೈಸೂರು
ಕರ್ನಾಟಕ ರಾಜ್ಯದ ಒಂದು ನಗರ / From Wikipedia, the free encyclopedia
ಟೆಂಪ್ಲೇಟು:Infobox ಜಿಲ್ಲೆ
ಮೈಸೂರು ಕರ್ನಾಟಕ ರಾಜ್ಯದಲ್ಲಿರುವ ಒಂದು ಪ್ರಸಿದ್ಧ ನಗರ. ಮೈಸೂರು ಅದೇ ಹೆಸರಿನ ಜಿಲ್ಲೆಯ ಆಡಳಿತ ಕೇಂದ್ರ ಮತ್ತು ಹಿಂದಿನ ಮೈಸೂರು ಸಂಸ್ಥಾನದ ಹಳೆಯ ರಾಜಧಾನಿ. ಇಲ್ಲಿ ಅನೇಕ ಅರಮನೆಗಳಿರುವುದರಿಂದ ಮೈಸೂರನ್ನು ಅರಮನೆಗಳ ನಗರ ಎಂದೂ ಕರೆಯಲಾಗುತ್ತದೆ. ಕರ್ನಾಟಕ ರಾಜ್ಯದ ಎರಡನೇ ಅತಿ ದೊಡ್ಡ ನಗರವೆಂಬ ಪ್ರಖ್ಯಾತಿಯನ್ನೂ ಪಡೆದಿದೆ. ಮೈಸೂರನ್ನ ನಮ್ಮ ಹೆಮ್ಮೆಯ ಸಾಂಸ್ಕೃತಿಕ ರಾಜಧಾನಿ ಎಂದು ಕರೆಯುತ್ತಾರೆ. ಮೈಸೂರು ನಮ್ಮ ರಾಜ್ಯ ಮಾತ್ರವಲ್ಲ ಇಡೀ ದೇಶದ ವಾರ್ಡನ್ ನಗರಗಳಲ್ಲಿ ಒಂದು. ಅದ್ಭುತವಾದ ಮೈ ನವಿರೇಳಿಸುವ ಸಂಸ್ಕೃತಿ ಮತ್ತು ಆಚಾರ ವಿಚಾರಕ್ಕೆ ಹೆಸರಾದ ಮೈಸೂರು ನಗರದಲ್ಲಿ ಮೊದಲ ಪಿರಂಗಿ ಗುಂಡು ಹಾಗೂ ರಾಕೇಟ್ಗಳ ದಾಳಿ ನಡೆದದ್ದು. ಮೈಸೂರನ್ನು ಚಂದದ ನಗರಿ ಎಂದು ಕರೆಯಲಾಗುತ್ತದೆ.
ಮೈಸೂರಿನ ಅಧಿದೇವತೆ
ಈಕೆಯು ಮೈಸೂರಿನ ಅಧಿದೇವತೆ, ಸಪ್ತಮಾತೃಕೆಯರಲ್ಲಿ ಏಳನೆಯವಳು. ಹಿಂದೂ ಧರ್ಮದಲ್ಲಿ, ಚಾಮುಂಡೇಶ್ವರಿ ಪ್ರಬಲವಾದ ದೇವತೆ. "ಚಾಮುಂಡಿ" ಎಂದೊಡನೆ ಈಕೆ ಶಿಷ್ಟ ಪುರಾಣದ ವಿಶಿಷ್ಟ ಶಕ್ತಿದೇವತೆ. ಆದಿಶಕ್ತಿಯಾಗಿ ಹುಟ್ಟಿ ದುಷ್ಟ ಶಿಕ್ಷಕಿ-ಶಿಷ್ಟರಕ್ಷಕಿಯಾಗಿ ಮಹಿಷೂರಿನ ಮಹಿಷನನ್ನು ಕೊಂದು, ಲೋಕ ಕಂಟಕರಾಗಿದ್ದ ಚಂಡ-ಮುಂಡರೆಂಬ ರಕ್ಕಸರನ್ನು ಸಂಹರಿಸಿ 'ಚಾಮುಂಡಿ'ಯಾಗಿದ್ದಾಳೆಂಬುದು ತಿಳಿಯುತ್ತದೆ. ಈಕೆ- ಷೋಡಶಿ, ಅಂಬೆ, ಈಶ್ವರಿ, ಚಂಡಿ, ಕಾಳಿ, ಭಗವತೀ, ಮಹೇಶ್ವರಿ, ಮಹಾದೇವಿ, ತ್ರಿಪುರ ಸುಂದರಿ, ದುರ್ಗೆ ಮುಂತಾದ ಹಲವು ಹೆಸರುಗಳಿಂದ ಕರೆಯಲ್ಪಡುತ್ತಾಳೆ. ಚಾಮುಂಡಿ ಮಹಿಷಮಂಡಲವನ್ನು ತನ್ನ ಹಿಡಿತಕ್ಕೆ ತೆಗೆದುಕೊಂಡು ಮಹಾಬಲಗಿರಿಯ ಮೇಲೆ ನೆಲೆಗೊಂಡಿ ದ್ದಾಳೆ. ಚಾಮುಂಡಿ ಬೆಟ್ಟವು ಸಮುದ್ರಮಟ್ಟಕ್ಕಿಂತ ಸುಮಾರು-೩೪೮೯ಅಡಿ ಎತ್ತರದಲ್ಲಿದೆ. ಮೈಸೂರಿನ ದೊಡ್ಡದೇವರಾಜ ಒಡೆಯರ್ ಅವರು ಬೆಟ್ಟವನ್ನೇರಲು ಬರುವ ಭಕ್ತಾದಿಗಳಿಗೆ ಅನುಕೂಲ ವಾಗಲೆಂದು ೧೧೦೧ ಮೆಟ್ಟಿಲುಗಳನ್ನು ಕಟ್ಟಿಸಿ, ೭೦೦ನೇ ಮೆಟ್ಟಿಲ ಬಳಿ ಬೃಹತ್ ನಂದಿ ವಿಗ್ರಹವನ್ನು ಸ್ಥಾಪಿಸಿದ್ದಾರೆ. ಆಶ್ವಯುಜ ಶುಕ್ಲಪಕ್ಷದ ನವರಾತ್ರಿಯ ಸಮಯದಲ್ಲಿ ಭಾರತಾದಾದ್ಯಂತ ಚಾಮುಂಡಿ ಆರಾಧನೆ "ದುರ್ಗೆ"ಯ ಹೆಸರಿನಲ್ಲಿ ಬಹಳ ವೈಭವಯುತವಾಗಿ ನಡೆಯುತ್ತದೆ. ನವರಾತ್ರಿ ದಿನಗಳಲ್ಲಿ ಅಷ್ಟಲಕ್ಷ್ಮೀಯರ, ಅಷ್ಟದುರ್ಗೆಯರ ಆರಾಧನೆಯನ್ನು ಚಾಮುಂಡಿ ಬೆಟ್ಟದಲ್ಲಿರುವ ದೇಗುಲದಲ್ಲಿ ಮಾಡಲಾಗುತ್ತದೆ. ನವ ದಿನವು ದೇವಿಗೆ ವಿಶಿಷ್ಟವಾದ ಅಲಂಕಾರಗಳನ್ನು, ಉಡುಗೆ-ತೊಡುಗೆ, ಆಭರಣಗಳಿಂದ ಚಾಮುಂಡೇಶ್ವರಿಯನ್ನು ಸಿಂಗರಿಸಿ ಭಕ್ತವೃಂದಕ್ಕೆ ಸಂತಸವನ್ನು ನೀಡುತ್ತಾರೆ. ಸೋಮನಾಥಪುರದಲ್ಲಿರುವ ಚೆನ್ನಕೇಶವ ದೇವಾಲಯ ಭಾರತದ ಕರ್ನಾಟಕ ರಾಜ್ಯದ ಮೈಸೂರು ಜಿಲ್ಲೆಯ ತಿರುಮಕೂಡಲು ನರಸೀಪುರದಲ್ಲಿರುವ ಒಂದು ಪಟ್ಟಣ ಮತ್ತು ಗ್ರಾಮ ಪಂಚಾಯತ್ ಆಗಿದೆ. ಇದು ಮೈಸೂರು ನಗರದಿಂದ 38 ಕಿಲೋಮೀಟರ್ (೨೪ ಮೈಲಿ) ದೂರದಲ್ಲಿದೆ ಮತ್ತು ಸೋಮನಾಥಪುರದಲ್ಲಿರುವ ಚೆನ್ನಕೇಶವ ದೇವಾಲಯಕ್ಕೆ ( ಕೇಶವ ಅಥವಾ ಕೇಶವ ದೇವಾಲಯ ಎಂದೂ ಕರೆಯುತ್ತಾರೆ) ಪ್ರಸಿದ್ಧವಾಗಿದೆ.