![cover image](https://wikiwandv2-19431.kxcdn.com/_next/image?url=https://upload.wikimedia.org/wikipedia/commons/thumb/a/ad/Kali_Temple_Dakshineswar.jpg/640px-Kali_Temple_Dakshineswar.jpg&w=640&q=50)
ರಾಮಕೃಷ್ಣ ಮಿಷನ್
ಭಾರತೀಯ ಸಂಸ್ಥೆ / From Wikipedia, the free encyclopedia
ಶ್ರೀ ರಾಮಕೃಷ್ಣ ಮಠ ಮತ್ತು ಮಿಶನ್ ರಾಮಕೃಷ್ಣ ಪರಮಹಂಸ ರ ಶಿಷ್ಯ ಮತ್ತು ಧಾರ್ಮಿಕ ಗುರು ಸ್ವಾಮಿ ವಿವೇಕಾನಂದರು ಮೇ ೧, ೧೮೯೭ರಲ್ಲಿ 'ರಾಮಕೃಷ್ಣ ಮಿಶನ್ ಅಸೋಷಿಯೇಶನ್' ಎಂಬ ಹೆಸರಿನಲ್ಲಿ ಸ್ಥಾಪಿಸಿದ ಹಿಂದೂ ಧಾರ್ಮಿಕ ಮತ್ತು ಸಾಮಾಜಿಕ ಸಂಸ್ಥೆ. [1]'ಆತ್ಮನೋ ಮೋಕ್ಷಾರ್ಥಮ್ ಜಗದ್ ಹಿತಾಯ ಚ' ಎಂಬ ಧ್ಯೇಯವಾಕ್ಯವನ್ನು ಹೊಂದಿರುವ ಈ ಸಂಸ್ಥೆಯು ಶ್ರೀರಾಮಕೃಷ್ಣ ಪರಮಹಂಸರು ತಮ್ಮ ಆಧ್ಯಾತ್ಮಿಕ ಅನುಭವಗಳಿಂದ ಬೋಧಿಸಿದ ವೇದಾಂತದ ತಳಹದಿಯ ಮೇಲೆ ಸ್ಥಾಪಿತವಾಯಿತು. ರಾಮಕೃಷ್ಣ ಮಠ (ಬಂಗಾಳಿ: রামকৃষ্ণ মঠ) ಮತ್ತು ರಾಮಕೃಷ್ಣ ಮಿಷನ್ (ಬಂಗಾಳಿ: রামকৃষ্ণ মিশন) ಅವಳಿ ಸಂಘಟನೆಗಳು ವಿಶ್ವದಾದ್ಯಂತ ಆಧ್ಯಾತ್ಮಿಕ ನಡೆಯುತ್ತಿರುವ ರಾಮಕೃಷ್ಣ ಚಳವಳಿ ಅಥವಾ ವೇದಾಂತ ಚಳವಳಿಯ ತಿರುಳುಭಾಗವಾಗಿದೆ.
![Thumb image](http://upload.wikimedia.org/wikipedia/commons/thumb/a/ad/Kali_Temple_Dakshineswar.jpg/320px-Kali_Temple_Dakshineswar.jpg)
ರಾಮಕೃಷ್ಣ ಮಿಷನ್ ಮೇ 1, 1897 ರಂದು ಶ್ರೀ ರಾಮಕೃಷ್ಣರ ಮುಖ್ಯ ಅನುಯಾಯಿ ಸ್ವಾಮಿ ವಿವೇಕಾನಂದರು ಸ್ಥಾಪಿಸಿದ ಲೋಕೋಪಯೋಗಿ, ಸ್ವಯಂಸೇವಕ ಸಂಸ್ಥೆ.
ಬರ ಪರಿಹಾರ, ನೆರೆಸಂತ್ರಸ್ತರ ಸಹಾಯ, ಗ್ರಾಮೀಣ ಜನರಿಗೆ ಶಿಕ್ಷಣ, ಆರೋಗ್ಯ ಸೇವೆಯೆ, ಗ್ರಾಮೀಣ ನಿರ್ವಹಣೆ, ಬುಡಕಟ್ಟು ಕಲ್ಯಾಣ, ಪ್ರಾಥಮಿಕ ಮತ್ತು ಉನ್ನತ ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಮೊದಲಾದ ಜನಸೇವಾ ಕಾರ್ಯಕ್ರಮಗಳನ್ನು ಈ ಸಂಸ್ಥೆಯ ವಿವಿಧ ಶಾಖೆಗಳು ನಿರ್ವಹಿಸುತ್ತವೆ. ಧಾರ್ಮಿಕ ಸಾಹಿತ್ಯ ಪ್ರಕಟಣೆ, ಶೀಲ ಸಂವರ್ಧನ ಶಿಬಿರಗಳು, ಪ್ರವಚನ ಮುಂತಾದವುಗಳ ಮೂಲಕ ಜನರ ಆಧ್ಯಾತ್ಮಿಕ ಅವಶ್ಯಕತೆಗಳನ್ನು ಇದು ಪೂರೈಸುತ್ತಿದೆ. ಇದರ ಪ್ರಧಾನ ಕಛೇರಿಯ ಅಸ್ತಿತ್ವ ಹೌರಾ ದ ಬೇಲೂರು ಮಠ, ಕೋಲ್ಕತಾ, ಭಾರತದಲ್ಲಿದೆ. ಭಾರತದ ಸನಾತನ ಹಿಂದೂ ಧರ್ಮ ಮತ್ತು ವೇದಾಂತ ಆಧಾರ ಸ್ತಂಭಗಳು.