ಹವ್ಯಕ
ಹವ್ಯಕರು, ಬ್ರಾಹ್ಮಣರ ಉಪಪಂಗಡ / From Wikipedia, the free encyclopedia
ಹವ್ಯಕ, ಬ್ರಾಹ್ಮಣ ಜಾತಿಯ ಒಳ ಪಂಗಡ. ಹವ್ಯಕರು ಪ್ರಮುಖವಾಗಿ ನೆಲೆಸಿರುವುದು ಕರ್ನಾಟಕದ ಮಲೆನಾಡು ಹಾಗೂ ಸಮುದ್ರ ತೀರದ ಜಿಲ್ಲೆಗಳಲ್ಲಿ. ಬಹುತೇಕ ಹವ್ಯಕರ ಪೂರ್ವಜರು ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಕೇರಳದ ಕಾಸರಗೋಡು ಜಿಲ್ಲೆಯವರು. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಬಳಿಯಿರುವ ಶ್ರೀ ರಾಮಚಂದ್ರಾಪುರ ಮಠ[1] ಮತ್ತು ಉತ್ತರ ಕನ್ನಡ ಜಿಲ್ಲೆಯ ಸಿರ್ಸಿ ತಾಲೂಕಿನಲ್ಲಿರುವ ಸೋಂದೆಯಲ್ಲಿರುವ ಸ್ವರ್ಣವಲ್ಲೀ ಮಠ ಇವರ ಪ್ರಮುಖ ಮಠಗಳು. ಮೂರನೇಯದಾದ, ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೋಕಿನ ಹೇರೂರಿನಲ್ಲಿರುವ ನೆಲೆಮಾವು ಪೀಠ ೨೦೦೨ರಿಂದ ಗುರುಗಳಿಲ್ಲದೆ ರಿಕ್ತವಾಗಿದೆ.[2] ಹವ್ಯಕರು ಶಂಕರಾಚಾರ್ಯರ ಅದ್ವೈತ ಸಿದ್ಧಾಂತದ ಅನುಯಾಯಿಗಳು. ಮೊದಲಿನಿಂದ ಮುಖ್ಯವಾಗಿ ವೈದಿಕರು ಮತ್ತು ಅಡಿಕೆ ಕೃಷಿಕರಾಗಿದ್ದು ಇತ್ತೀಚಿನ ದಶಕಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ತೊಡಗಿಕೊಂಡಿದ್ದಾರೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕರ್ನಾಟಕದಲ್ಲಿ ಹವ್ಯಕರ ಪಾತ್ರ ಗಣನೀಯವಾಗಿದೆ. ಉಪ್ಪಿನ ಸತ್ಯಾಗ್ರಹ, ಅಸಹಕಾರ ಚಳುವಳಿಗಳಲ್ಲಿ ಭಾಗವಹಿಸಿದ್ದರು.